ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು
A cow died after a tree fell during illegal tree cutting in a forest area at Neerulli near Thirthahalli. Police have registered a case and started investigation.
ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ತಾಲೂಕಿನ ಹಾರೋಗೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಳಿಮಠ ಸಮೀಪದ ನೀರುಳ್ಳಿಯಲ್ಲಿ ಕೌಶಿಕ್ ಎಂಬಾತ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುತ್ತಿದ್ದನು ಎಂದು ತಿಳಿದುಬಂದಿದೆ. ಈ ವೇಳೆ ಆಹಾರಕ್ಕಾಗಿ ಮರದ ಸೊಪ್ಪು ತಿನ್ನಲು ಬಂದಿದ್ದ ಹಸುವಿನ ಮೇಲೆ ಅಕಸ್ಮಿಕವಾಗಿ ಮರ ಬಿದ್ದ ಪರಿಣಾಮ ಅದು ಸ್ಥಳದಲ್ಲೇ ಸಾವನ್ನಪ್ಪಿದೆ.
ಮೃತ ಹಸು ಕುಂದೇಕೊಪ್ಪ ಗ್ರಾಮದ ಮಂಜುನಾಥ್ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…