ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಕೀರ್ತಿಗೆ ಸನ್ಮಾನ

Student Keerthi from Soraba, who got selected for Zee Kannada Sarigamapa Season 22 mega audition without formal training, was felicitated for her remarkable achievement.

ಸೊರಬ: ಬಡತನದ ನಡುವೆಯೇ ಅಪಾರ ಪ್ರತಿಭೆ ಪ್ರದರ್ಶಿಸಿ ಯಾವುದೇ ಶಾಸ್ತ್ರೀಯ ಸಂಗೀತ ತರಬೇತಿ ಇಲ್ಲದೆ ‘ಜೀ ಕನ್ನಡ ಸರಿಗಮಪ’ ಸೀಸನ್ 22ರ ಮೆಗಾ ಆಡಿಷನ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಕೀರ್ತಿಗೆ ಸೊರಬ ತಾಲೂಕಿನಲ್ಲಿ ಭಾನುವಾರ ಭರ್ಜರಿ ಸನ್ಮಾನ ಕಾರ್ಯಕ್ರಮ ನಡೆಯಿತು.

ತಾಲೂಕಿನ ಹರೀಶಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕೀರ್ತಿ ಸಾಧನೆಯನ್ನು ಶ್ಲಾಘಿಸಿದ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುನೀಲ್ ಗೌಡ, “ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸರಿಯಾದ ವೇದಿಕೆ ದೊರೆತರೆ ಅವರು ಅಸಾಧ್ಯವನ್ನೂ ಸಾಧಿಸಬಲ್ಲರು ಎಂಬುದಕ್ಕೆ ಕೀರ್ತಿಯೇ ಸಾಕ್ಷಿ” ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಸೌಲಭ್ಯಗಳಿಲ್ಲದ ಪರಿಸ್ಥಿತಿಯಲ್ಲಿಯೇ ಕೀರ್ತಿ ತನ್ನ ದನಿಯ ಮಾಧುರ್ಯ ಹಾಗೂ ಆತ್ಮವಿಶ್ವಾಸದ ಮೂಲಕ ರಾಜ್ಯ ಮಟ್ಟದ ವೇದಿಕೆಗೆ ತಲುಪಿರುವುದು ತಾಲೂಕಿನ ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.

ಹಳ್ಳಿಯ ಸೊಗಡಿನಲ್ಲಿ ಬೆಳೆದ ಈ ಬಾಲಕಿ ಇದೀಗ ಪ್ರತಿಷ್ಠಿತ ಸಂಗೀತ ವೇದಿಕೆಯಲ್ಲಿ ತನ್ನ ಕಂಠಸಿರಿಯನ್ನೇ ಪ್ರದರ್ಶಿಸಲು ಸಜ್ಜಾಗಿರುವುದು ಎಲ್ಲರಿಗೂ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ್ ಮೋಗೇರ್ ವಹಿಸಿದ್ದರು. ಹರೀಶಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ ತಬಲಿ ಸೇರಿದಂತೆ ಹಲವರು ವಿದ್ಯಾರ್ಥಿನಿಯ ಸಾಧನೆಯನ್ನು ಕೊಂಡಾಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಕೇಶ್ ತಬಲಿ, ಮಾಜಿ ಉಪಾಧ್ಯಕ್ಷ ರವಿಕುಮಾರ್, ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್, ಸಿ.ಆರ್.ಪಿ ಮಂಜುನಾಥ್, ಸುಧಾಕರ್ ನಾಯ್ಕ, ಉಮಾಪತಿ ನಾಯ್ಕ, ರಾಜು ಕೆಂಚಿಕೊಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

13 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

15 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

15 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

15 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago