ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections.

ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಡುವೆಯೇ ಈ ಮಸೂದೆಗಳನ್ನು ತರಾತುರಿಯಲ್ಲಿ ಮಂಡಿಸಿರುವುದು ಅನುಮಾನಾಸ್ಪದವಾಗಿದೆ ಎಂದು ಅವರು ಟೀಕಿಸಿದರು.

ಮಂಗಳವಾರ ಪ್ರೆಸ್ ಟ್ರಸ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಕೆಲವು ರಾಜ್ಯಗಳಲ್ಲಿ ಮತದಾನ ಬಾಕಿ ಇದ್ದಾಗಲೇ ಮಸೂದೆ ಮಂಡನೆ ಮಾಡಿರುವುದು ಸರಿಯಲ್ಲ. ಚುನಾವಣಾ ಫಲಿತಾಂಶಗಳ ನಂತರವೂ ಇದನ್ನು ಮಂಡಿಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟರು. ಬಿಜೆಪಿ ಮುಖಂಡರು ತಾವೇ ಬುದ್ಧಿವಂತರಾಗಿದ್ದು, ಇತರರನ್ನು ತಗ್ಗಾಗಿ ನೋಡುತ್ತಿದ್ದಾರೆ. ಆದರೆ ದೇಶದ ಜನರಿಗೆ ವಾಸ್ತವ ತಿಳಿಯಲು ಆರಂಭವಾಗಿದೆ ಎಂದರು.

ಕ್ಷೇತ್ರ ಮರು ವಿಂಗಡಣೆ ಮಸೂದೆ ಯನ್ನು ಮಹಿಳಾ ಮೀಸಲಾತಿ ಮಸೂದೆಗೆ ಜೋಡಿಸಿರುವುದೇ ತಪ್ಪಾಗಿದೆ. ಈ ಎರಡಕ್ಕೂ ಸಂಬಂಧವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಜನಗಣತಿ ವರದಿ ಬಂದ ಬಳಿಕ ಕ್ಷೇತ್ರ ವಿಂಗಡಣೆ ಮಾಡಬಹುದು ಎಂದು ಅವರು ಹೇಳಿದರು.

‘ಎರಡಕ್ಕೂ ಒಂದೇ ಮತ ಹೇಗೆ?’

ಎರಡೂ ಮಸೂದೆಗಳಿಗೆ ಒಂದೇ ಮತ ಹಾಕುವ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು. ಇದು ಜನರನ್ನು ಗೊಂದಲಕ್ಕೆ ತಳ್ಳುವ ಪ್ರಯತ್ನವಾಗಿದೆ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಮಹಿಳೆಯರ ಬಗ್ಗೆ ಗೌರವವಿಲ್ಲದ ಬಿಜೆಪಿ ರಾಜಕೀಯ ಲಾಭಕ್ಕಾಗಿ ಮಸೂದೆ ಮಂಡಿಸಿದೆ ಎಂದು ಅವರು ಟೀಕಿಸಿದರು.

ಖರ್ಗೆ ಹೇಳಿಕೆಗೆ ಬೆಂಬಲ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ಮುಖಂಡರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿದ ಅವರು, ಖರ್ಗೆಯವರ ಹೇಳಿಕೆಗೆ ತಮ್ಮ ಬೆಂಬಲವಿದೆ ಎಂದರು. ದಲಿತ ಸಮುದಾಯದ ಮೇಲಿನ ಅನ್ಯಾಯದ ಹಿನ್ನೆಲೆಯಲ್ಲಿ ಅವರು ಆ ರೀತಿಯ ಮಾತು ಹೇಳಿದ್ದಾರೆ ಎಂದು ಸಮರ್ಥಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿಗೆ ಚರ್ಚೆಗೆ ಸವಾಲು
ಮಹಿಳಾ ಮೀಸಲಾತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆಗೆ ನಾನು ಸಿದ್ಧ. ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ ಹಾಗೂ ಎಸ್.ಎನ್. ಚನ್ನಬಸಪ್ಪ ಚರ್ಚೆಗೆ ಬರಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

8 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

12 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

14 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

17 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

17 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago