ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues.

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 10(1)(ಡಿ) ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಅಮಾನತು ಜಾರಿಯಾಗಿದೆ.

ಅಂಜನ್ ಕುಮಾರ್ ಅವರು 2017ರಿಂದ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದು, 2022ರ ಡಿಸೆಂಬರ್ 8ರಿಂದ 2023ರ ಜುಲೈ 18ರವರೆಗೆ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್‌ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿವೆ.

ಇದಲ್ಲದೆ, ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಉನ್ನತ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.

ಈ ಹಿಂದೆ ಸಹ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆದಿದ್ದರೂ, ವರ್ತನೆಯಲ್ಲಿ ಬದಲಾವಣೆ ಕಾಣಿಸದಿರುವುದು ಗಮನಕ್ಕೆ ಬಂದಿದೆ. ಕಾಲೇಜಿನ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತಿರುವ ಹಿನ್ನೆಲೆ ಹಾಗೂ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಚಾರಣೆ ಮುಂದುವರಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಲೇಜು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಮಾನತು ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ಆದೇಶವನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

19 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

20 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

20 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago