ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
A 25-year-old youth from Hunsur died on the spot in a horrific head-on collision between a KSRTC bus and a bike near Sagara, Shivamogga. The bus driver reportedly fled the scene; police investigation is underway.
ಸಾಗರ : ಇಲ್ಲಿನ ಸಿರಿವಂತೆ–ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಹುಣಸೂರು ಮೂಲದ ಅಶೋಕ್ (25) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆಯ ಸುಮಾರಿಗೆ ಸಿರಿವಂತೆ ಮತ್ತು ಗಾಡಿಪುರ ರಸ್ತೆಯಲ್ಲಿ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಬೈಕ್ ಸವಾರ ಅಶೋಕ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದು, ಸ್ಥಳದಲ್ಲೇ ಅತಿಯಾದ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ತಕ್ಷಣ ಸ್ಥಳೀಯರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಬಸ್ ಚಾಲಕನಿಗಾಗಿ ಹುಡುಕಾಟ ಮುಂದುವರಿದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…