ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ
Marymatha High School in Ripponpet records 95% SSLC results, with Siri N securing first rank by scoring 96% (599/625).
ರಿಪ್ಪನ್ ಪೇಟೆ: ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.
ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕನ್ನಡದಲ್ಲಿ 123, ಇಂಗ್ಲಿಷ್ನಲ್ಲಿ 98, ಹಿಂದಿಯಲ್ಲಿ 100, ಗಣಿತದಲ್ಲಿ 93, ವಿಜ್ಞಾನದಲ್ಲಿ 90 ಹಾಗೂ ಸಮಾಜ ವಿಜ್ಞಾನದಲ್ಲಿ 95 ಅಂಕಗಳನ್ನು ಪಡೆದು ಆಕೆಯ ಪ್ರತಿಭೆಯನ್ನು ತೋರಿಸಿದ್ದಾಳೆ.
ಸಿರಿ ಎನ್ ರಿಪ್ಪನ್ ಪೇಟೆಯ ಶಬರೀಶನಗರದ ನೂತೋಜಿ ರಾವ್ ಹಾಗೂ ಶ್ವೇತಾ ದಂಪತಿಗಳ ಪುತ್ರಿಯಾಗಿದ್ದು, ಆಕೆಯ ಸಾಧನೆಗೆ ಕುಟುಂಬದವರೂ ಹಾಗೂ ಶಿಕ್ಷಕರೂ ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನೂ, ಧಾತ್ರಿ ಡಿ ಭಗತ್ 582 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಕವಿತಾ ಹೆಚ್ 570 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 36 ಮಂದಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಈ ಸಾಧನೆಗೆ ಶಿಕ್ಷಕ ವೃಂದ, ಪೋಷಕರು ಮತ್ತು ಸ್ಥಳೀಯರ ಸಹಕಾರವೇ ಪ್ರಮುಖ ಕಾರಣವೆಂದು ಶಾಲಾ ವಲಯ ತಿಳಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶಗಳ ನಿರೀಕ್ಷೆಯೂ ವ್ಯಕ್ತವಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್