ರಿಪ್ಪನ್ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ
Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here.
ರಿಪ್ಪನ್ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪಟ್ಟಣದ ಹೊಸನಗರ ರಸ್ತೆಯಲ್ಲಿ ಟಯರ್ ಅಂಗಡಿ ನಡೆಸುತ್ತಿದ್ದ ನಾಸೀರುದ್ದೀನ್ ಅವರು, ತಮ್ಮ ಸರಳತೆ ಹಾಗೂ ಸ್ನೇಹಮಯಿ ಸ್ವಭಾವದಿಂದ ಪಟ್ಟಣದಾದ್ಯಂತ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವು ನಾಳೆ (ಗುರುವಾರ) ಬೆಳಿಗ್ಗೆ ಪಟ್ಟಣದ ಸಾಗರ ರಸ್ತೆಯಲ್ಲಿರುವ ಖಬರ್ಸ್ಥಾನ್ನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…