ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ
A hotel worker from Bihar was found dead inside a car in Sagara, Shivamogga district. Police suspect a financial dispute led to the murder, and the hotel owner has been taken into custody.
ಸಾಗರ: ಹೊಟೆಲ್ ಕಾರ್ಮಿಕನೊಬ್ಬನ ಹತ್ಯೆ ಪ್ರಕರಣವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಎಸ್ಪಿ ಬಿ. ನಿಖಿಲ್ ತಿಳಿಸಿದ್ದಾರೆ.
ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಟಿಂಕು ಶರ್ಮಾ (30) ಗುರುವಾರ ಬೆಳಗ್ಗೆ ಹೊಂಡಾ ಸಿಟಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾನೆ.
ಈ ಸಂಬಂಧ ಕೆಫೆ ಮಾಲಿಕ ಇಮ್ರಾನ್ (30) ಅವರನ್ನು ಆರೋಪಿಯಾಗಿ ಗುರುತಿಸಲಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಟಿಂಕು ಶರ್ಮಾ ಮತ್ತು ಮಾಲಿಕ ಇಮ್ರಾನ್ ನಡುವೆ ಹಣಕಾಸಿನ ವಿಚಾರವಾಗಿ ಬುಧವಾರ ರಾತ್ರಿ ಜಗಳ ನಡೆದಿತ್ತು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಕೂಡ ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಈ ವೇಳೆ ಇಮ್ರಾನ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಎಸ್ಪಿ ನಿಖಿಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…