ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ
A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College.
ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್, ಕಾಲೇಜು ಸಮೀಪದ ಹಂಪ್ ಬಳಿ ತಲುಪಿದಾಗ ಅಪಘಾತ ಸಂಭವಿಸಿದೆ. ಬಸ್ಸಿನ ಮುಂದೆ ಸಾಗುತ್ತಿದ್ದ ಬೈಕ್ ಸವಾರ ಹಠಾತ್ತಾಗಿ ದಿಕ್ಕು ಬದಲಾಯಿಸಿದ ಹಿನ್ನೆಲೆಯಲ್ಲಿ, ಅವನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ತಕ್ಷಣ ದಿಕ್ಕು ಬದಲಾಯಿಸಿದ್ದಾನೆ.
ಆದರೆ ಪರಿಸ್ಥಿತಿ ಏಕಾಏಕಿ ಬದಲಾಗುತ್ತಿದ್ದಂತೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ಕಂಡ ಸ್ಥಳೀಯರು ಹಾಗೂ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಿಕಾರಿಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…