ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation.

ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಗ್ರಾಮ ಪಂಚಾಯತಿ ಭವನದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯವಾಗಿ ಮಾತನಾಡಿದ ಸಾಹಿತಿ ಶಾಂತರಾಮ್ ಪ್ರಭು, “ಜಗತ್ತು ಕಂಡ ಅಚ್ಚರಿ ವ್ಯಕ್ತಿತ್ವವಾಗಿದ್ದ ಶ್ರೀಗಳು ತಮ್ಮ ತಾರುಣ್ಯದಲ್ಲಿಯೇ ವೈಯಕ್ತಿಕ ಜೀವನವನ್ನು ತ್ಯಜಿಸಿ, ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತ, ಭೇದವಿಲ್ಲದೆ ಅನ್ನ ದಾಸೋಹ ಹಾಗೂ ವಿದ್ಯಾದಾನ ಮಾಡಿರುವ ಸಿದ್ಧಪುರುಷರು” ಎಂದು ಹೇಳಿದರು.

ಇಂದಿನ ಸಮಾಜದಲ್ಲಿ ಅಕ್ಷರಜ್ಞಾನ ಹೊಂದಿದವರೇ ಕೆಲವೊಮ್ಮೆ ಅವಿದ್ಯಾವಂತರಂತೆ ವರ್ತಿಸುತ್ತಿರುವುದು ವಿಷಾದನೀಯ ಎಂದು ಹೇಳಿದ ಅವರು, “ಅನ್ನದಾನ ಕ್ಷಣಿಕ ತೃಪ್ತಿ ನೀಡಿದರೆ, ವಿದ್ಯಾದಾನ ಜೀವನಪೂರ್ತಿ ಬೆಳಕು ನೀಡುತ್ತದೆ. ಆದ್ದರಿಂದ ವಿದ್ಯಾದಾನವೇ ಶ್ರೇಷ್ಠ ದಾನ” ಎಂದು ಅಭಿಪ್ರಾಯಪಟ್ಟರು.

ಗಾಂಧೀಜಿಯ ತತ್ವಸಿದ್ಧಾಂತವಿಲ್ಲದ ರಾಜಕಾರಣ ಮಹಾಪಾಪವಾಗಿದ್ದು, ಶೀಲವಿಲ್ಲದ ಶಿಕ್ಷಣ ಸಮಾಜಕ್ಕೆ ಶೋಭೆ ತರುವುದಿಲ್ಲ. ಸಂಸ್ಕಾರಯುತ ಶಿಕ್ಷಣದ ಮೂಲಕ ಸಮಗ್ರ ವ್ಯಕ್ತಿತ್ವ ನಿರ್ಮಾಣ ಮಾಡುವುದು ಇಂದಿನ ಅಗತ್ಯ ಎಂದು ಅವರು ಹೇಳಿದರು.

ವೀರಶೈವ ಸಮಾಜದ ಅಧ್ಯಕ್ಷ ಮಸರೂರು ಉಮೇಶ್ ಮಾತನಾಡಿ, “ಶ್ರೀಗಳ ಸೇವೆಯನ್ನು ನಾವು ಸದಾ ಸ್ಮರಿಸಬೇಕು. ಇಂತಹ ಮಹಾಪುರುಷರ ಜಯಂತಿ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಮಾನವ ಧರ್ಮದ ಸಂದೇಶಗಳು ವ್ಯಾಪಿಸುತ್ತವೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಗ್ಗಲಿ ಲಿಂಗಪ್ಪ ಅವರು, “11 ವರ್ಷಗಳ ಹಿಂದೆ ಸ್ನೇಹಿತರೊಂದಿಗೆ ಈ ಜಯಂತಿ ಆಚರಣೆಯನ್ನು ಪ್ರಾರಂಭಿಸಿದ್ದು, ಇಂದು ನೂರಾರು ಮಂದಿಗೆ ಶ್ರೀಗಳ ಆದರ್ಶಗಳು ತಲುಪುವಂತಾಗಿದೆ” ಎಂದು ಹೇಳಿದರು.

ಪಿ.ಎಸ್.ಐ ರಾಜುರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಧರ್ ನಿರೂಪಣೆ ಮಾಡಿದರು, ನಾಗರತ್ನ ದೇವರಾಜ್ ಪ್ರಾರ್ಥನೆ ಸಲ್ಲಿಸಿದರು, ದೂನ ಸೋಮಶೇಖರ್ ಸ್ವಾಗತಿಸಿದರು ಹಾಗೂ ಪದ್ಮಾ ಸುರೇಶ್ ವಂದಿಸಿದರು.

ಈ ಸಂದರ್ಭದಲ್ಲಿ ಸತೀಶ್ ಹೆಗಡೆ, ಅಡಿಕಟ್ಟು ಕರಿಬಸಪ್ಪ, ಆರ್. ರಾಘವೇಂದ್ರ, ಸುಧೀಂದ್ರ ಪೂಜಾರಿ, ಈಶ್ವರ್ ಶೆಟ್ಟಿ, ವರ್ತೇಶ್, ತ. ಮ. ನರಸಿಂಹ, ಮಲ್ಲಿಕಾರ್ಜುನ, ಗೋಪಾಲ್, ಲೀಲಾ ಶಂಕರ್, ಆರ್.ಡಿ. ಶೀಲಾ, ಪದ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

13 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

14 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

14 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

15 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago