ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents.

ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ ಮನೆಯಿಂದ ಹೊರಟು ಬಂದಿದ್ದ 10 ವರ್ಷದ ಬಾಲಕಿಯೊಬ್ಬಳು ಶಿವಮೊಗ್ಗ ನಗರದ ಬಸ್ ನಿಲ್ದಾಣದಲ್ಲಿ ಅಳುತ್ತ ಕುಳಿತಿದ್ದ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸ್ಪಂದಿಸಿದ ಅಕ್ಕ ಪಡೆ ಹಾಗೂ ಪೊಲೀಸರು ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.

ಶಿಕಾರಿಪುರ ಟೌನ್ ಪೊಲೀಸ್ ವ್ಯಾಪ್ತಿಯಲ್ಲಿರುವ ಮನೆದಲ್ಲಿ ತಂದೆ-ತಾಯಿ ನಡುವೆ ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಭಯಗೊಂಡ ಬಾಲಕಿ, ತಾನಿಗೂ ಏಟು ಬೀಳಬಹುದು ಎಂಬ ಆತಂಕದಿಂದ ಮನೆ ಬಿಟ್ಟು ಹೊರಟಿದ್ದಾಳೆ. ಬಳಿಕ ಆಕೆ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದು ಒಬ್ಬಳೇ ಅಳುತ್ತ ಕುಳಿತಿದ್ದಳು.

ಈ ಕುರಿತು ಮಾಹಿತಿ ಪಡೆದ ಕರ್ತವ್ಯ ನಿರತ ಪೊಲೀಸರು ತಕ್ಷಣ ಅಕ್ಕ ಪಡೆ ಸದಸ್ಯರೊಂದಿಗೆ ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ವಿಚಾರಣೆ ನಡೆಸಿದರು. ಬಾಲಕಿಯ ವಿವರಗಳನ್ನು ಆಧರಿಸಿ ಶಿಕಾರಿಪುರ ಟೌನ್ ಪೊಲೀಸರ ಮೂಲಕ ಪೋಷಕರನ್ನು ಸಂಪರ್ಕಿಸಲಾಯಿತು.

ಬಾಲಕಿಯನ್ನು ಮುನ್ನೆಚ್ಚರಿಕೆಯಾಗಿ ಮಹಿಳಾ ಠಾಣೆಯಲ್ಲಿ ಸುರಕ್ಷಿತವಾಗಿ ಇರಿಸಲಾಗಿದ್ದು, ನಂತರ ಪೋಷಕರು ಆಗಮಿಸಿ ಮಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ಇಲಾಖೆ ಮಕ್ಕಳ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

6 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

13 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

15 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

18 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

23 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

1 day ago