ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts.

ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಳೆಬೈಲಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿಯೊಬ್ಬರಿಗೆ ಏಪ್ರಿಲ್ 18ರ ಸಂಜೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಮಾತನಾಡಬೇಕು ಎಂದು ಮನೆ ಬಳಿ ಬಂದಿದ್ದಾನೆ. ಮನೆಗೆ ಬಂದವನೇ ನನಗೆ ಹಣ ಬೇಕು ಎಂದು ಬೇಡಿಕೆಯಿಟ್ಟಿದ್ದಾನೆ. ವ್ಯಾಪಾರಿ ತನ್ನ ಬಳಿ ಹಣವಿಲ್ಲ ಎಂದು ಹೇಳಿದಾಗ, ರಾತ್ರಿ 8 ಗಂಟೆಗೆ ಬರುತ್ತೇವೆ, ಅಷ್ಟರೊಳಗೆ ಹಣ ರೆಡಿ ಇಟ್ಟುಕೋ ಎಂದು ಬೆದರಿಕೆ ಹಾಕಿ ಹೋಗಿದ್ದಾನೆ. ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ಸಹಚರರೊಂದಿಗೆ ಮರಳಿ ಬಂದ ದುಷ್ಕರ್ಮಿ, ನಮ್ಮ ಬಾಸ್ ಹೇಳಿದ್ದಾರೆ, ಕೂಡಲೇ ಒಂದು ಲಕ್ಷ ರೂಪಾಯಿ ಕೊಡಬೇಕು, ಇಲ್ಲದಿದ್ದರೆ ನಿನ್ನನ್ನು ಸಾಯಿಸುತ್ತೇವ” ಎಂದು ಲಾಂಗ್ ಮತ್ತು ಚಾಕು ತೋರಿಸಿ ಬೆದರಿಸಿದ್ದಾನೆ. ಇದರಿಂದ  ಭಯಗೊಂಡ ವ್ಯಾಪಾರಿ ಮೊದಲಿಗೆ 25,000 ರೂಪಾಯಿ ಹಣವನ್ನು ನೀಡಿದ್ದಾರೆ.

ಅಷ್ಟಕ್ಕೇ ಸುಮ್ಮನಾಗದ ಕಿರಾತಕರು, ಅಕೌಂಟ್‌ನಲ್ಲಿದ್ದ ಉಳಿದ ಹಣವನ್ನು ವರ್ಗಾಯಿಸುವಂತೆ ಪೀಡಿಸಿದ್ದಾರೆ. ಅನಿವಾರ್ಯವಾಗಿ ವ್ಯಾಪಾರಿ ಅವರು ನೀಡಿದ ನಂಬರ್‌ಗೆ ಮತ್ತೆ 25,000 ರೂಪಾಯಿಗಳನ್ನು ಫೋನ್ ಪೇ ಮೂಲಕ ವರ್ಗಾಯಿಸಿದ್ದಾರೆ.

ನಂತರ ರಾತ್ರಿ 10 ಗಂಟೆಯಾದರೂ ದುಷ್ಕರ್ಮಿಗಳ ಕಾಟ ನಿಂತಿಲ್ಲ. ಮತ್ತೆ ಮನೆ ಬಳಿ ಬಂದ ತಂಡ, ಚಾಕು ಮತ್ತು ಲಾಂಗ್‌ಗಳಿಂದ ಮನೆಯ ಗೇಟ್ ಹಾಗೂ ಕಾಂಪೌಂಡ್ ಮೇಲೆ ಹಲ್ಲೆ ನಡೆಸಿ ಗೇಟ್ ತೆಗೆಯುವಂತೆ ಬೆದರಿಸಿದ್ದಾರೆ. ತಕ್ಷಣ ಎಚ್ಚೆತ್ತ ವ್ಯಾಪಾರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿರುವುದನ್ನು ಕಂಡ ದುಷ್ಕರ್ಮಿಗಳ ತಂಡ ಅಲ್ಲಿಂದ ಪರಾರಿಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago