ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು
A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges.
ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 15ರಂದು ಸಂತ್ರಸ್ತ ವ್ಯಕ್ತಿಯ ಮೊಬೈಲ್ಗೆ ವಿವಿಧ ಸಂಖ್ಯೆಗಳ ಮೂಲಕ ಸಂದೇಶಗಳು ಬಂದಿದ್ದವು. ಸಂದೇಶ ಕಳುಹಿಸಿದವರು ತಾವು ಕೇರಳ ಲಾಟರಿ ಪ್ರತಿನಿಧಿಗಳೆಂದು ಹೇಳಿಕೊಂಡು, ದೂರುದಾರರಿಗೆ ₹12 ಲಕ್ಷ ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿದ್ದಾರೆ. ಈ ಸುಳ್ಳು ಆಮಿಷಕ್ಕೆ ಒಳಗಾದ ವ್ಯಕ್ತಿ ವಂಚಕರ ಜಾಲಕ್ಕೆ ಸಿಲುಕಿದ್ದಾರೆ.
ನಂತರ ವಾಟ್ಸಾಪ್ ಮೂಲಕ ಕ್ಯೂಆರ್ ಕೋಡ್ಗಳನ್ನು ಕಳುಹಿಸಿದ ಆರೋಪಿಗಳು, ಬಹುಮಾನದ ಹಣವನ್ನು ಖಾತೆಗೆ ಜಮಾ ಮಾಡಲು ಟಿಡಿಎಸ್ (TDS), ತೆರಿಗೆ ಮತ್ತು ಪ್ರಕ್ರಿಯಾ ಶುಲ್ಕಗಳನ್ನು ಪಾವತಿಸಬೇಕು ಎಂದು ತಿಳಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ತರು ತಮ್ಮ ಬ್ಯಾಂಕ್ ಆಫ್ ಬರೋಡಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ₹1,84,296 ವರ್ಗಾವಣೆ ಮಾಡಿದ್ದಾರೆ.
ಹಣ ವರ್ಗಾವಣೆಯಾದ ಬಳಿಕ ವಂಚಕರು ಯಾವುದೇ ಲಾಟರಿ ಮೊತ್ತ ನೀಡದೇ ಸಂಪರ್ಕ ಕಡಿತಗೊಳಿಸಿದ್ದಾರೆ. ಬಳಿಕ ತಾವು ಮೋಸ ಹೋಗಿರುವುದನ್ನು ಅರಿತ ಸಂತ್ರಸ್ತರು ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…