ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ
An inter-district thief was arrested in Shivamogga for stealing gold, cash, and a mobile phone by entering a house through a window while residents were asleep.
ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ ಕುಟುಂಬದವರು ಕೊಠಡಿಯಲ್ಲಿ ನಿದ್ರಿಸುತ್ತಿದ್ದ ವೇಳೆ ಈ ಕಳ್ಳತನ ನಡೆದಿದೆ.
ಆರೋಪಿಯು ಬಾಗಿಲಿನ ಪಕ್ಕದಲ್ಲಿದ್ದ ಕಿಟಕಿಯನ್ನು ತೆರೆದು, ಅದರ ಮೂಲಕ ಕೈ ಹಾಕಿ ಬಾಗಿಲಿನ ಲಾಕ್ ತೆಗೆದು ಒಳನುಗ್ಗಿದ್ದಾನೆ. ಬಳಿಕ ಮನೆಯವರು ಮಲಗಿದ್ದ ಕೊಠಡಿಯ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ, ಮನೆಯಲ್ಲಿ ಇದ್ದ ಚಿನ್ನಾಭರಣ, ನಗದು ಹಾಗೂ ಮೊಬೈಲ್ಗಳನ್ನು ಕಳವು ಮಾಡಿದ್ದಾನೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಹಾಗೂ ಎಎಸ್ಪಿ ಎ.ಜಿ. ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ ತುಂಗಾನಗರ ಠಾಣೆಯ ಇನ್ಸ್ಪೆಕ್ಟರ್ ಕೆ.ಟಿ. ಗುರುರಾಜ್ ಮತ್ತು ಪಿಎಸ್ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಚಾಂದ್ ಪೀರ್ @ ಮೊಹಮದ್ ಯೂನಸ್ (31) ಎಂಬಾತನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…
ರಿಪ್ಪನ್ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…