Headlines

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ. ವೀಣಾ ಭಟ್, ನಿವೃತ್ತ ಪ್ರಾಧ್ಯಾಪಕರಾದ ಕಿರಣ್ ಆರ್ ದೇಸಾಯಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರ್ಯಪ್ಪ ಎ. ಜಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಮಹಿಳಾ ಪೊಲೀಸರ ಆರೋಗ್ಯ, ಆತ್ಮವಿಶ್ವಾಸ ವೃದ್ಧಿ, ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯರಿಗೆ ಲಭ್ಯವಿರುವ ಕಾನೂನು ನೆರವು ಕುರಿತಂತೆ ಸಮಗ್ರ ಮಾಹಿತಿ ನೀಡಲಾಯಿತು.

ಇದೇ ವೇಳೆ ಭದ್ರಾವತಿ ನಗರ ವೃತ್ತದ ಸಿಪಿಐ ನಾಗಮ್ಮ ಅವರು ಕರ್ತವ್ಯದ ವೇಳೆ ಎದುರಾಗುವ ಒತ್ತಡವನ್ನು ಹೇಗೆ ನಿಭಾಯಿಸಬೇಕು ಮತ್ತು ತನಿಖಾ ಕ್ರಮಗಳಲ್ಲಿ ಅನುಸರಿಸಬೇಕಾದ ಸೂಕ್ತ ವಿಧಾನಗಳ ಕುರಿತು ಪ್ರಾಯೋಗಿಕ ಸಲಹೆಗಳನ್ನು ಹಂಚಿಕೊಂಡರು.

ಒಟ್ಟಿನಲ್ಲಿ, ಮಹಿಳಾ ಪೊಲೀಸರ ಮನೋಸ್ಥೈರ್ಯ ಮತ್ತು ಕಾರ್ಯಕ್ಷಮತೆಯನ್ನು ವೃದ್ಧಿಸಲು ಈ ಕಾರ್ಯಾಗಾರ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

About The Author