ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ

Villagers of Talale near Ripponpet protest against prolonged power outage due to a damaged transformer, affecting irrigation and drinking water. MLA Araga Jnanendra warns officials to resolve the issue within 24 hours.

ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಉಂಟಾದ ಅಸಮರ್ಪಕ ವಿದ್ಯುತ್ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಶಾಸಕರಾದ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದರು.

ಮೂಗುಡ್ತಿಯಲ್ಲಿ ಮುಖಂಡ ಕಗ್ಗಲಿ ಲಿಂಗಪ್ಪ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಶಾಸಕರನ್ನು ಭೇಟಿ ಮಾಡಿ ಸಮಸ್ಯೆಯ ಗಂಭೀರತೆಯನ್ನು ವಿವರಿಸಿದರು.
ಕಳೆದ ಕೆಲವು ದಿನಗಳಿಂದ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮಕ್ಕಳಿಗೆ ಪರೀಕ್ಷೆಗೆ ತಯಾರಿ ನಡೆಸಲು ತೊಂದರೆಯಾಗುತಿದ್ದು ಹಾಗೂ ಇದರಿಂದ ಜಮೀನಿನ ಬಾವಿ ಮತ್ತು ಮೋಟಾರ್‌ಗಳಿಗೆ ವಿದ್ಯುತ್ ಲಭ್ಯವಾಗದೇ ಅಡಿಕೆ ತೋಟಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ. ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದ್ದು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಮನವರಿಕೆ ಮಾಡಿದರು.

ಈ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸುವಂತೆ ಆಗ್ರಹಿಸಿ, ತಳಲೆ ಗ್ರಾಮಸ್ಥರು ರಿಪ್ಪನ್ ಪೇಟೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಇತ್ತೀಚೆಗೆ ದಿಢೀರನೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಥಳದಲ್ಲೇ ಪ್ರತಿಕ್ರಿಯಿಸಿದ ಶಾಸಕ ಆರಗ ಜ್ಞಾನೇಂದ್ರ ಅವರು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ತೀವ್ರ ತರಾಟೆಗೆ ತೆಗೆದುಕೊಂಡರು. 24 ಗಂಟೆಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗ್ರಾಮಸ್ಥರ ಸಮಸ್ಯೆಗೆ ಶೀಘ್ರ ಪರಿಹಾರ ದೊರಕುವ ಭರವಸೆಯನ್ನು ಶಾಸಕ ನೀಡಿದ್ದು, ತಳಲೆ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಯಾವಾಗ ಪರಿಹಾರವಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

7 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

11 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

11 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

23 hours ago

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…

1 day ago

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…

1 day ago