ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh.

ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

2020ರ ಜನವರಿ 15ರಂದು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ನಿವಾಸಿ ಫ್ಲೋರಾ ನ್ಯಾನ್ಸಿ, ರಾಜಶೇಖರಯ್ಯ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ಸಂಬಂಧಕ್ಕೆ ತನ್ನ ಗಂಡ ಪ್ರಕಾಶ್ ಬಾಬು ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಆರೋಪಿತರು ಸಂಚು ರೂಪಿಸಿದ್ದರು.

ಪ್ರಕಾಶ್ ಬಾಬುವಿಗೆ ಮೊದಲು ಮತ್ತು ಬರುವ ಔಷಧಿ ನೀಡಿ, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಮಂಜುನಾಥ್ ಇ.ಓ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಬಳಿಕ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಾದ ಫ್ಲೋರಾ ನ್ಯಾನ್ಸಿ ಹಾಗೂ ರಾಜಶೇಖರಯ್ಯ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಇದೇ ವೇಳೆ ಆರೋಪಿತರಿಗೆ ಒಟ್ಟು ₹14 ಲಕ್ಷ ದಂಡ ವಿಧಿಸಲಾಗಿದ್ದು, ಮೃತನ ಕುಟುಂಬಕ್ಕೆ ಪರಿಹಾರವಾಗಿ ₹5 ಲಕ್ಷ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

40 minutes ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

7 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

19 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

19 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago