ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

Two forest officials have been suspended over allegations of illegal use and misuse of forest land. The department has initiated an inquiry into the matter following serious complaints.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. KELADI ಶಾಖೆಯ ಉಪವಲಯ ಅರಣ್ಯಾಧಿಕಾರಿ ಡಿಆರ್‌ಎಫ್ ವಿಜಯಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕ ಶಿವನಗೌಡ ದೊಡ್ಡಬಸಪ್ಪನವರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.

ಮಾವಲಿ ಗ್ರಾಮದ ಸರ್ವೆ ನಂಬರ್ 43ಕ್ಕೆ ಸೇರಿದ ಅರಣ್ಯ ಇಲಾಖೆಯ ಭೂಮಿಯಲ್ಲಿ ನೆಡು ತೋಪು ಹಾಗೂ ಸೊಪ್ಪಿನ ಬೆಟ್ಟ ಪ್ರದೇಶವಿದ್ದು, ಅಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ನಿಯಮಬಾಹಿರವಾಗಿ ರಸ್ತೆ ನಿರ್ಮಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬೆಳೆಸಲಾಗಿದ್ದ ನೂರಾರು ಕೇಶಿಯ ಹಾಗೂ ಇತರ ಕಾಡು ಮರಗಳನ್ನು ಅಕ್ರಮವಾಗಿ ಕಡಿದು ಸಾಗಣೆ ಮಾಡಲಾಗಿದೆ ಎಂಬ ಗಂಭೀರ ದೂರು ಸಹ ದಾಖಲಾಗಿತ್ತು.ಈ ದೂರಿನ ಆಧಾರದಲ್ಲಿ ಶಿವಮೊಗ್ಗ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆಟಿ ಹನುಮಂತಪ್ಪ ಅವರು ಬುಧವಾರ ಅಮಾನತು ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಆರರಂದು ದೂರು ಸಲ್ಲಿಕೆಯಾಗಿತ್ತು. ತನಿಖೆ ವೇಳೆ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಘಟನೆ ನಡೆದ ಸ್ಥಳವನ್ನು “ಅರಣ್ಯದ ಹೊರಭಾಗ” ಎಂದು ತಪ್ಪಾಗಿ ನಮೂದಿಸಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಗೆ ಅನುಕೂಲವಾಗುವ ಉದ್ದೇಶದಿಂದಲೇ ಈ ರೀತಿಯ ತೋಷಪೂರಿತ ದಾಖಲೆ ಸೃಷ್ಟಿಸಲಾಗಿದೆ ಎಂಬ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ.

ಸಚಿವರ ಕಚೇರಿಯಿಂದಲೇ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಅರಣ್ಯ ಸಂಪತ್ತಿನ ನಾಶ ಹಾಗೂ ದಾಖಲೆ ತಿರುಚುವ ಆರೋಪಗಳ ನಡುವೆ ಅಧಿಕಾರಿಗಳ ಅಮಾನತು ಕ್ರಮ ಸಾರ್ವಜನಿಕ ವಲಯದಲ್ಲಿ ಸ್ವಾಗತಕ್ಕೆ ಪಾತ್ರವಾಗಿದೆ.

ಅರಣ್ಯ ಸಂಪತ್ತಿನ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಇಚ್ಛೆಗೆ ಬಂದಂತೆ ನಡೆದುಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಭೂಮಿ ಅಕ್ರಮ ಬಳಕೆ, ಮರಗಳ ಕಡಿತ ಹಾಗೂ ದಾಖಲೆ ತಿರುಚುವಂತಹ ಗಂಭೀರ ಆರೋಪಗಳು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಸರ್ಕಾರವು ಇಂತಹ ಪ್ರಕರಣಗಳನ್ನು ಸಾಮಾನ್ಯ ಶಿಸ್ತು ಕ್ರಮಕ್ಕೆ ಸೀಮಿತಗೊಳಿಸದೆ, ಉನ್ನತ ಮಟ್ಟದ ಸ್ವತಂತ್ರ ತನಿಖೆಗೆ ಒಪ್ಪಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

10 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

11 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

11 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 day ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 days ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 days ago