ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team.

​ಹೊಸನಗರ: ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು, ಅಕ್ರಮವಾಗಿ ಮರಗಳನ್ನು ಕಡಿದು ನಾಟ ಹಾಗೂ ಸೌದೆಯನ್ನಾಗಿ ಪರಿವರ್ತಿಸಿ ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಹೊಸನಗರ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

​ಘಟನೆಯ ವಿವರ:

ಹೊಸನಗರ ತಾಲ್ಲೂಕಿನ ಹುಂಚಾ ಹೋಬಳಿಯ ಹೊನ್ನೇಬೈಲು ಗ್ರಾಮದ ಸರ್ವೇ ನಂಬರ್ 99ರ ಗೋಮಾಳ ಪ್ರದೇಶದಲ್ಲಿ ಅಕ್ರಮ ಒತ್ತುವರಿ ನಡೆದಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಿನಾಂಕ 12-05-2026 ರಂದು ದಾಳಿ ನಡೆಸಿದ್ದರು. ಈ ವೇಳೆ ನಿಟ್ಟೂರು ನಿವಾಸಿ ಸುರೇಶ ಎನ್.ಜಿ (50 ವರ್ಷ) ಎಂಬುವವರು ಬೀಟೆ ಹಾಗೂ ಇತರೆ ಬೆಲೆಬಾಳುವ ಜಾತಿಯ ಮರಗಳನ್ನು ಬುಡಸಮೇತ ಕಿತ್ತು, ಅವುಗಳನ್ನು ಅಕ್ರಮವಾಗಿ ನಾಟ ಮತ್ತು ಸೌದೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವುದು ಪತ್ತೆಯಾಗಿದೆ.

ಈ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ 1963 ಮತ್ತು ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಹೊಸನಗರ ವಲಯ ಕಚೇರಿಯಲ್ಲಿ ಮೊಕದ್ದಮೆ ಸಂಖ್ಯೆ: 08/2026-27ನ್ನು ದಾಖಲಿಸಿಕೊಳ್ಳಲಾಗಿದೆ. ದಾಳಿಯ ವೇಳೆ ಪತ್ತೆಯಾದ ಬೀಟೆ ಸೇರಿದಂತೆ ವಿವಿಧ ಜಾತಿಯ ನಾಟ ಹಾಗೂ ಸೌದೆಯನ್ನು ಇಲಾಖಾ ವಶಕ್ಕೆ ಪಡೆದು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದ ಎ1 ಆರೋಪಿ ಸುರೇಶನನ್ನು ಹಿಡಿಯಲು ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿ, ಮೇಲಾಧಿಕಾರಿಗಳ ನಿರ್ದೇಶನದಂತೆ ದಿನಾಂಕ 14-05-2026 ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಕುಮಾರ್ ಎಸ್, ಉಪ ವಲಯ ಅರಣ್ಯಾಧಿಕಾರಿಗಳಾದ ಆಂಜನೇಯ ಎ ಜಿ,  ಬಸವರಾಜ್ ಜಿಗಳಿಕೊಪ್ಪ, ಹಾಲಪ್ಪ ಕೆ ಆನವೇರಿ, ಕ್ಷೇಮಾಭಿವೃದ್ಧಿ ನೌಕರರಾದ ಕೃಷ್ಣಮೂರ್ತಿ ಕೆ ಆರ್ ಹಾಗೂ ಅರಣ್ಯ ಇಲಾಖೆಯ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

10 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

10 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

10 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

16 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

16 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

20 hours ago