Categories: Blog

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

Karnataka Administrative Tribunal (KAT) has revoked the suspension order issued against Kodachadri Government First Grade College assistant professor Anjan Kumar M, citing violation of service rules.

ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ ಮಹತ್ವದ ಆದೇಶ ಹೊರಡಿಸಿದೆ.

ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್ ಕುಮಾರ ಎಂ. ಅವರ ವಿರುದ್ಧ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಾಂಶುಪಾಲರ ಪತ್ರದೊಂದಿಗೆ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ದಿನಾಂಕ 2026ರ ಏ.13 ರಂದು ಅಮಾನತುಗೊಳಿಸಿದ್ದರು. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಅಂಜನ್‌ ಕುಮಾರ್‌ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು (ಅರ್ಜಿ ಸಂಖ್ಯೆ 2406/2026).

ಪ್ರಕರಣವನ್ನು ವಿಚಾರಣೆಗೊಳಪಡಿಸಿದ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯ ಎಸ್.ವೈ. ವಟವಟಿ ಹಾಗೂ ಆಡಳಿತ ಸದಸ್ಯ ಡಾ. ಅಮಿತಾ ಪ್ರಸಾದ್ ಅವರನ್ನೊಳಗೊಂಡ ಪೀಠವು, ಇಲಾಖೆಯ ಕ್ರಮವನ್ನು ಪರಿಶೀಲಿಸಿ ಅಮಾನತು ಮಾಡಿರುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅಮಾನತು ಕ್ರಮ ಕೈಗೊಂಡಿರುವುದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 10(3) ಉಲ್ಲಂಘನೆಯಾಗಿದೆ ಎಂದು ನ್ಯಾಯಮಂಡಳಿ ಸ್ಪಷ್ಟಪಡಿಸಿದೆ. ಅದರಂತೆ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ್ದ ಅಮಾನತು ಆದೇಶವನ್ನು ನ್ಯಾಯಮಂಡಳಿ ರದ್ದುಪಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

40 minutes ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

5 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

7 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

19 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

19 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago