ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ
Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts.
ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2ರಿಂದ 3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿ ಇಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಗಣೇಶ ಬಿನ್ ಬಾಬುಶೆಟ್ಟಿ (40), ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಹೊಸನಗರ ವಲಯ ಕಚೇರಿಯಲ್ಲಿ ಅರಣ್ಯ ಮೊಕದ್ದಮೆ ಸಂಖ್ಯೆ 14/2026-27 ದಾಖಲಿಸಲಾಗಿದೆ.
ವಿಭಾಗದ ಪರವಾಗಿ ವಶಪಡಿಸಿಕೊಂಡಿರುವ ಮರದ ನಾಟ ತುಂಡುಗಳನ್ನು ಅಮಾನತ್ತುಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿ ನವೀನ ಕುಮಾರ್ ಸಿ.ಎಂ., ಪ್ರಶಾಂತ್ ಜಿ., ಪುಟ್ಟಸ್ವಾಮಿ ಕೆ.ವಿ., ಗಿರೀಶ್ ಎಸ್. ಸೇರಿದಂತೆ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳಾದ ಸುರೇಶ್, ಪುನೀತ್, ಮಹೇಶ್ ಹೆಚ್.ಜಿ. ಮತ್ತು ಇತರರು ಭಾಗವಹಿಸಿದ್ದರು.
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…