ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when the family members were away.

ಹೊಸನಗರ: ಹೊಸನಗರದ ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ನೀಡದೇ ಮೇ ೨೮ರ ಬಕ್ರೀದ್ ರಜೆಯ  ಸಂದರ್ಭದಲ್ಲಿ  ಮನೆಯನ್ನುತೆರವು ಮಾಡಿದ ಘಟನೆ ನಡೆದಿದ್ದು ಮನೆಯ ಮಾಲೀಕರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ಮುಂಭಾಗ ಧರಣಿ ನಡೆಸಿದ ಘಟನೆ ನಡೆದಿದೆ.

ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗೋಡಿ ಗ್ರಾಮದ ಸರ್ವೆ ನಂಬರ್ ೭ರಲ್ಲಿ ನಾಗರಾಜ ಎನ್ನುವವರು ವಾಸವಿದ್ದ ಮನೆಯನ್ನು  ಯಾವುದೇ ನೋಟೀಸು ನೀಡದೆ  ಯಾರೂ ಇಲ್ಲದ ಸಮಯದಲ್ಲಿ ಅರಣ್ಯ  ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಸುಮಾರು ೪೦ ವರ್ಷಗಳಿಂದ ಈ ಜಾಗದಲ್ಲಿ ವಾಸವಿದ್ದೇವೆ. ನಮಗೆ ಕಂದಾಯ ಡಿಮ್ಯಾಂಡ್ ಹಾಗೂ ಇಲ್ಲಿ ವಾಸವಗಿರುವುದಕ್ಕೆ ಎಲ್ಲ ದಾಖಲೆಗಳು ಇವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ಮನೆಯನ್ನು ದ್ವಂಸ ಮಾಡಿ ಕಿತ್ತು ಹಾಕಿದ್ದಾರೆ. ಕೂಲಿ ಮಾಡಿ ಜೀವನ ಸಾಗಿಸುವ ಬಡಕುಟುಂಬಕ್ಕೆ ವಾಸಿಸಲು ಮನೆಯೇ ಇಲ್ಲದಂತಾಗಿದ್ದು ಮುಂದೆ ಮಳೆಗಾಲವಿರುವುದರಿಂದ ವಾಸಿಸಲು ಯಾವುದೇ ಮನೆಯಿಲ್ಲ. ಬಡಕುಟುಂಬಕ್ಕೆ ನ್ಯಾಯ ಕೊಡಬೇಕೆಂದು ಕೇಳಿಕೊಂಡರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago