ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್!
Shocking humanity-defying crime near Kollur: Following a tragic road accident that claimed two lives, a local thief stole 18g of gold jewelry from a victim’s body. Within 24 hours of the complaint, Kollur police swiftly tracked down and arrested the accused, recovering all stolen ornaments worth ₹2.07 Lakhs. Read the full investigative story here.
ಕುಂದಾಪುರ: ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದ ದುರಂತದ ನಡುವೆ, ಮೃತ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 17ರಂದು ಕೊಡಚಾದ್ರಿಯಿಂದ ವಾಪಸ್ಸಾಗುತ್ತಿದ್ದ ಜೀಪು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಜ್ಯೋತಿ ಮತ್ತು ಅರಿಯಾ ಅನೂಫ್ ಎಂಬ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದ ರಕ್ತಸಿಕ್ತ ದೃಶ್ಯ, ಗಾಯಾಳುಗಳ ಆಕ್ರಂದನ ಮತ್ತು ಸಹಾಯಕ್ಕಾಗಿ ಕೇಳಿಬರುತ್ತಿದ್ದ ಗೋಳಾಟದ ನಡುವೆ, ಮಾನವೀಯತೆಯೇ ಮರೆತಿದ್ದ ಕಿಡಿಗೇಡಿಯೊಬ್ಬ ಮೃತ ಜ್ಯೋತಿ ಅವರ ಮೃತದೇಹದ ಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದನು.
ಅಪಘಾತದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವರನ್ನು ರಕ್ಷಿಸಬೇಕಿದ್ದ ಸಂದರ್ಭದಲ್ಲಿ, ಮೃತದೇಹದ ಮೇಲಿರುವ ಒಡವೆಗಳ ಮೇಲೆ ಕಣ್ಣುಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ನಡೆದು ಒಂದು ವಾರದ ಬಳಿಕ ಕುಟುಂಬಸ್ಥರು ಮೃತದೇಹವನ್ನು ಪರಿಶೀಲಿಸಿದಾಗ ಒಡವೆಗಳು ಮಾಯವಾಗಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 38/2026ರಡಿ ಬಿಎನ್ಎಸ್ ಕಲಂ 303(2) ಅನ್ವಯ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಮತ್ತು ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಪಿಎಸ್ಐ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತನಿಖೆಯನ್ನು ತೀವ್ರಗೊಳಿಸಿತು.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ಸೆರೆಹಿಡಿದಿದ್ದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಗಳನ್ನು ವಿಶ್ಲೇಷಿಸಿದ ಪೊಲೀಸರು, ಆರೋಪಿಯನ್ನು ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ (40) ಎಂದು ಗುರುತಿಸಿ ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು ₹2.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ,7.160 ಗ್ರಾಂ ತೂಕದ ಚಿನ್ನದ ಸರ ಸೇರಿವೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮೃತರ ಆಭರಣ ದೋಚಿದ ಈ ಅಮಾನವೀಯ ಕೃತ್ಯದ ವಿರುದ್ಧ ಸ್ಥಳೀಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪೊಲೀಸರ ತಕ್ಷಣದ ಸ್ಪಂದನೆಯನ್ನು ಶ್ಲಾಘಿಸಿದ್ದಾರೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…