ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ
A tragic lorry accident near Konanduru in Thirthahalli taluk claimed the life of a boy and left several passengers seriously injured after a vehicle carrying 35 people overturned on Hullathi Road.
ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಮೇ 16ರಂದು ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹರಿಹರ ಮೂಲದ ಸುಮಾರು 35 ಮಂದಿ ಪ್ರಯಾಣಿಕರನ್ನು ಹೊತ್ತ ಲಾರಿ ಹಣೆಗೆರೆ ಕಟ್ಟೆಯಿಂದ ಪಿರನ್ಗುಡ್ಡ ಕಡೆಗೆ ಸಾಗುತ್ತಿತ್ತು. ಈ ವೇಳೆ ಕೋಣಂದೂರು ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಪ್ರಯಾಣಿಕರು ರಸ್ತೆ ಬದಿಗೆ ಚದುರಿ ಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ತಕ್ಷಣ ಕೋಣಂದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…