ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು
A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case.
ತೀರ್ಥಹಳ್ಳಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ಕತ್ತರಿಸಿ ಸುಮಾರು ₹2 ಲಕ್ಷ ಮೌಲ್ಯದ ಚಿನ್ನದ ಮುತ್ತಿನ ಸರವನ್ನು ಕಳವು ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೈಮರ ಜಂಕ್ಷನ್ ಬಳಿ ನಡೆದಿದೆ.
ಕಟಗಾರು ಗ್ರಾಮದ ಪ್ರೇಮಾ ಭೋಜರಾಜ್ ಸರವನ್ನು ಕಳೆದುಕೊಂಡ ಮಹಿಳೆಯಾಗಿದ್ದಾರೆ.
ತೀರ್ಥಹಳ್ಳಿ ಬಸ್ ನಿಲ್ದಾಣದಿಂದ ಮೂಡಬಿದಿರೆಯಲ್ಲಿರುವ ತಮ್ಮ ತವರು ಮನೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಬಸ್ನಲ್ಲಿ ಆಸನ ಲಭ್ಯವಿಲ್ಲದ ಕಾರಣ ನಿಂತುಕೊಂಡೇ ಪ್ರಯಾಣಿಸುತ್ತಿದ್ದ ವೇಳೆ, ಇಬ್ಬರು ಅಪರಿಚಿತ ಮಹಿಳೆಯರು ತಮ್ಮ ಪಕ್ಕದಲ್ಲಿ ಜಾಗ ನೀಡಿ ಕೂರಿಸಿಕೊಂಡಿದ್ದರು ಎನ್ನಲಾಗಿದೆ.
ಸ್ವಲ್ಪ ಸಮಯದ ಬಳಿಕ ಆ ಮಹಿಳೆಯರು, “ನಿಮ್ಮ ಕುತ್ತಿಗೆಯಲ್ಲಿರುವ ಸರ ತುಂಡಾಗಿದೆ, ಅದನ್ನು ಬ್ಯಾಗ್ನಲ್ಲಿ ಇಟ್ಟುಕೊಳ್ಳಿ” ಎಂದು ಸಲಹೆ ನೀಡಿದ್ದರು. ಅದರಂತೆ ಪ್ರೇಮಾ ಅವರು 56 ಗ್ರಾಂ ತೂಕದ ಲಕ್ಷ್ಮೀ ಪೆಂಡೆಂಟ್ ಹೊಂದಿದ್ದ ಚಿನ್ನದ ಮುತ್ತಿನ ಸರವನ್ನು ಕುತ್ತಿಗೆಯಿಂದ ತೆಗೆದು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು.
ಬಳಿಕ ಪ್ರಯಾಣದ ವೇಳೆ ನಿದ್ರೆಗೆ ಜಾರಿದ್ದ ಅವರು, ಬಸ್ ಕೈಮರ ಜಂಕ್ಷನ್ ತಲುಪಿದಾಗ ಎಚ್ಚರಗೊಂಡಿದ್ದಾರೆ. ಆಗ ವ್ಯಾನಿಟಿ ಬ್ಯಾಗ್ನ ಒಂದು ಬದಿಯನ್ನು ಕತ್ತರಿಸಿ, ಜಿಪ್ ತೆರೆಯುವ ಮೂಲಕ ಒಳಗಿದ್ದ ಚಿನ್ನದ ಸರವನ್ನು ಕಳ್ಳರು ಎಗರಿಸಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಪ್ರೇಮಾ ಭೋಜರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…