ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು
A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case.
ತೀರ್ಥಹಳ್ಳಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ಕತ್ತರಿಸಿ ಸುಮಾರು ₹2 ಲಕ್ಷ ಮೌಲ್ಯದ ಚಿನ್ನದ ಮುತ್ತಿನ ಸರವನ್ನು ಕಳವು ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೈಮರ ಜಂಕ್ಷನ್ ಬಳಿ ನಡೆದಿದೆ.
ಕಟಗಾರು ಗ್ರಾಮದ ಪ್ರೇಮಾ ಭೋಜರಾಜ್ ಸರವನ್ನು ಕಳೆದುಕೊಂಡ ಮಹಿಳೆಯಾಗಿದ್ದಾರೆ.
ತೀರ್ಥಹಳ್ಳಿ ಬಸ್ ನಿಲ್ದಾಣದಿಂದ ಮೂಡಬಿದಿರೆಯಲ್ಲಿರುವ ತಮ್ಮ ತವರು ಮನೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಬಸ್ನಲ್ಲಿ ಆಸನ ಲಭ್ಯವಿಲ್ಲದ ಕಾರಣ ನಿಂತುಕೊಂಡೇ ಪ್ರಯಾಣಿಸುತ್ತಿದ್ದ ವೇಳೆ, ಇಬ್ಬರು ಅಪರಿಚಿತ ಮಹಿಳೆಯರು ತಮ್ಮ ಪಕ್ಕದಲ್ಲಿ ಜಾಗ ನೀಡಿ ಕೂರಿಸಿಕೊಂಡಿದ್ದರು ಎನ್ನಲಾಗಿದೆ.
ಸ್ವಲ್ಪ ಸಮಯದ ಬಳಿಕ ಆ ಮಹಿಳೆಯರು, “ನಿಮ್ಮ ಕುತ್ತಿಗೆಯಲ್ಲಿರುವ ಸರ ತುಂಡಾಗಿದೆ, ಅದನ್ನು ಬ್ಯಾಗ್ನಲ್ಲಿ ಇಟ್ಟುಕೊಳ್ಳಿ” ಎಂದು ಸಲಹೆ ನೀಡಿದ್ದರು. ಅದರಂತೆ ಪ್ರೇಮಾ ಅವರು 56 ಗ್ರಾಂ ತೂಕದ ಲಕ್ಷ್ಮೀ ಪೆಂಡೆಂಟ್ ಹೊಂದಿದ್ದ ಚಿನ್ನದ ಮುತ್ತಿನ ಸರವನ್ನು ಕುತ್ತಿಗೆಯಿಂದ ತೆಗೆದು ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು.
ಬಳಿಕ ಪ್ರಯಾಣದ ವೇಳೆ ನಿದ್ರೆಗೆ ಜಾರಿದ್ದ ಅವರು, ಬಸ್ ಕೈಮರ ಜಂಕ್ಷನ್ ತಲುಪಿದಾಗ ಎಚ್ಚರಗೊಂಡಿದ್ದಾರೆ. ಆಗ ವ್ಯಾನಿಟಿ ಬ್ಯಾಗ್ನ ಒಂದು ಬದಿಯನ್ನು ಕತ್ತರಿಸಿ, ಜಿಪ್ ತೆರೆಯುವ ಮೂಲಕ ಒಳಗಿದ್ದ ಚಿನ್ನದ ಸರವನ್ನು ಕಳ್ಳರು ಎಗರಿಸಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಪ್ರೇಮಾ ಭೋಜರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…