ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!
Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office.
ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ವ್ಯಾಪಕ ದಾಳಿ ನಡೆಸಿದ್ದಾರೆ.
ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯ ಮೇಲೂ ದಾಖಲೆ ಪರಿಶೀಲನೆ ಕೈಗೊಂಡಿವೆ.
ಭದ್ರಾವತಿ ತಾಲ್ಲೂಕಿನ ನಿಂಬೆಗೊಂದಿ, ಮಂಗೋಟೆ ಹಾಗೂ ಸನ್ಯಾಸಿಕೊಡಮಗ್ಗಿ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಹಾಗೂ ಕೂಡಲಿ, ತೀರ್ಥಹಳ್ಳಿ ತಾಲ್ಲೂಕಿನ ಮಂಡುವಳ್ಳಿ, ತೂದೂರು ಮತ್ತು ದಬ್ಬಣಗದ್ದೆ ಪ್ರದೇಶಗಳಲ್ಲಿರುವ ಮರಳು ಕ್ವಾರಿಗಳ ಮೇಲೂ ಕಾರ್ಯಾಚರಣೆ ನಡೆಸಲಾಗಿದೆ.
ಹೊಸನಗರ ತಾಲ್ಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಹಾಗೂ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರದೇಶಗಳಲ್ಲಿಯೂ ಅಕ್ರಮ ಮರಳು ಚಟುವಟಿಕೆಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.
ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತಂತೆ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ ಈ ದಾಳಿ ನಡೆಸಲಾಗಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಅಕ್ರಮ ಮರಳು ಸಾಗಣೆ ವಿಚಾರವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು.
ಲೋಕಾಯುಕ್ತ ದಾಳಿಯ ಬಳಿಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಇನ್ನಷ್ಟು ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…