ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office.

ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ವ್ಯಾಪಕ ದಾಳಿ ನಡೆಸಿದ್ದಾರೆ.

ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯ ಮೇಲೂ ದಾಖಲೆ ಪರಿಶೀಲನೆ ಕೈಗೊಂಡಿವೆ.

ಭದ್ರಾವತಿ ತಾಲ್ಲೂಕಿನ ನಿಂಬೆಗೊಂದಿ, ಮಂಗೋಟೆ ಹಾಗೂ ಸನ್ಯಾಸಿಕೊಡಮಗ್ಗಿ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಹಾಗೂ ಕೂಡಲಿ, ತೀರ್ಥಹಳ್ಳಿ ತಾಲ್ಲೂಕಿನ ಮಂಡುವಳ್ಳಿ, ತೂದೂರು ಮತ್ತು ದಬ್ಬಣಗದ್ದೆ ಪ್ರದೇಶಗಳಲ್ಲಿರುವ ಮರಳು ಕ್ವಾರಿಗಳ ಮೇಲೂ ಕಾರ್ಯಾಚರಣೆ ನಡೆಸಲಾಗಿದೆ.

ಹೊಸನಗರ ತಾಲ್ಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಹಾಗೂ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರದೇಶಗಳಲ್ಲಿಯೂ ಅಕ್ರಮ ಮರಳು ಚಟುವಟಿಕೆಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.

ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತಂತೆ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ ಈ ದಾಳಿ ನಡೆಸಲಾಗಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಅಕ್ರಮ ಮರಳು ಸಾಗಣೆ ವಿಚಾರವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು.

ಲೋಕಾಯುಕ್ತ ದಾಳಿಯ ಬಳಿಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಇನ್ನಷ್ಟು ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

5 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

7 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

10 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

15 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

17 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago