ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು – ಶಾಸಕ ಗೋಪಾಲಕೃಷ್ಣ ಬೇಳೂರು

ಕಲಾವಿದರನ್ನು ಕಡೆಗಣಿಸುವ ಸಂಪ್ರದಾಯ ಬೆಳೆಯುತ್ತಿರುವುದು ಆತಂಕಕಾರಿ – ಬಿ. ಟಾಕಪ್ಪ ಕಣ್ಣೂರು

MLA Gopalakrishna Beluru highlights global MNC job opportunities for rural graduates at the Ripponpet College event, alongside a call to preserve Karnataka’s folk arts by B. Takappa Kannur.

​ರಿಪ್ಪನ್‌ಪೇಟೆ: ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಲ್ಲಿ ವಿಪುಲ ಉದ್ಯೋಗಾವಕಾಶಗಳಿವೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

​ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ೨೦೨೫-೨೬ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿ ​ಉನ್ನತ ವಿದ್ಯಾರ್ಹತೆ ಹೊಂದಿರುವ ಯುವಕರಿಗೆ ವಿದೇಶಗಳಲ್ಲಿ ಕೆಂಪು ಕಂಬಳಿ ಸ್ವಾಗತ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ, ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಉಪನ್ಯಾಸಕರು ನಿಗಾವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು. ಅಲ್ಲದೆ, ಸಮಾಜದಲ್ಲಿ ಮೂಢನಂಬಿಕೆ ಬಿತ್ತಿ ವಂಚಿಸುವವರ ಬಗ್ಗೆ ಯುವಜನತೆ ಜಾಗೃತರಾಗಿರಬೇಕು. ಎನ್.ಎಸ್.ಎಸ್ ಶಿಬಿರಗಳ ಮೂಲಕ ಸ್ವಚ್ಛತೆ ಹಾಗೂ ಸಮಾಜಮುಖಿ ಕಾರ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ. ಟಾಕಪ್ಪ ಕಣ್ಣೂರು, ಇಂದಿನ ವಿದ್ಯಾರ್ಥಿಗಳಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ಸುಲಭವಾಗಿ ದೊರೆಯುತ್ತಿದ್ದು, ಪದವಿ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

​ಆಧುನಿಕತೆಯ ಭರಾಟೆಯಲ್ಲಿ ನಮ್ಮ ಶ್ರೀಮಂತ ಜಾನಪದ ಕಲೆಗಳು ಮತ್ತು ಕಲಾವಿದರು ಮೂಲೆಗುಂಪಾಗುತ್ತಿರುವುದು ತೀವ್ರ ಆತಂಕದ ವಿಚಾರ. ಕರ್ನಾಟಕದಲ್ಲಿ ೧೮೪ಕ್ಕೂ ಹೆಚ್ಚು ಪ್ರಕಾರದ ಜಾನಪದ ಕಲೆಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಕಲಾವಿದರ ಬದುಕನ್ನು ಹಸನಗೊಳಿಸುವ ಕಾರ್ಯ ತುರ್ತಾಗಿ ಆಗಬೇಕಿದೆ. ಹಿಂದೆ ನಿರ್ದಿಷ್ಟ ಪ್ರದೇಶ, ಜನಾಂಗಕ್ಕೆ ಸೀಮಿತವಾಗಿದ್ದ ಕಲೆಗಳು ಇಂದು ಎಲ್ಲೆಡೆ ವಿಸ್ತರಿಸಿದ್ದರೂ, ಮೂಲ ಉಡುಗೆ-ತೊಡುಗೆಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ ಎಂದು ಕಳವಳ ವ್ಯಕ್ತಪಡಿಸಿದರು.

​ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಆರ್.ಕೆ. ರಾಜು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿಡಿಸಿ ಉಪಾಧ್ಯಕ್ಷ ಶ್ರೀನಿವಾಸ್ ಆಚಾರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪಿಯೂಸ್ ರೋಡ್ರಿಗಸ್, ಮಂಜುನಾಥ್ ಕಾಮತ್, ರಮೇಶ್ ಫ್ಯಾನ್ಸಿ, ರಾಘವೇಂದ್ರ ಕೆಂಚನಾಲ, ಹೊಸನಗರ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ಸೇರಿದಂತೆ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

58 minutes ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

14 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

16 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

16 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

16 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago