ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans.

ರಿಪ್ಪನ್‌ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಶೀರ್ಷಿಕೆಯಡಿ ವಿಶೇಷ ಕವಿಗೋಷ್ಠಿ ಹಾಗೂ ಕವನ ಸಂಗ್ರಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಾಲೂಕ್ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ತ ಮ ನರಸಿಂಹ ಹಾಗೂ ನಾಥ್ ಬಳಗದ ರಾ. ಸೋಮಶೇಖರ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಕಸಾಪ ಹೋಬಳಿ ಘಟಕ , ಕಲಾ ಕೌಸ್ತುಭ ಕನ್ನಡ ಸಂಘ , ನಾಥ್ ಬಳಗ ಸಾಗರ ರಸ್ತೆಯ ಬಿ.ಎಸ್.ಎನ್.ಎಲ್ ಕಚೇರಿ ಸಮೀಪದ ಶ್ರೀ ರಾಮ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಾಹಿತಿಗಳ ಸಮ್ಮುಖದಲ್ಲಿ ಕವನ ವಾಚನಕ್ಕೆ ವೇದಿಕೆ ಸಿದ್ಧವಾಗಿದೆ.ಕಾರ್ಯಕ್ರಮದಲ್ಲಿ ಹಿರಿಯರು ಮತ್ತು ಕಿರಿಯರು ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಉತ್ತಮ ಕವಿತೆಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲಾ ಯುವ ಕವಿಗಳು ಹಾಗೂ ಕವಯತ್ರಿಯರಿಗೂ ಸಮಾಧಾನಕರ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ವಾಚಿಸಲ್ಪಡುವ ಆಯ್ದ ಕವಿತೆಗಳನ್ನು ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುವ ಯೋಜನೆಯೂ ರೂಪಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಕವಿತೆಗಳು ‘ಮುಂಗಾರು’ ವಿಷಯಾಧಾರಿತವಾಗಿರಬೇಕು. ಕವಿತೆಗಳು ಸ್ವರಚಿತವಾಗಿದ್ದು, 20 ಸಾಲುಗಳನ್ನು ಮೀರಿರಬಾರದು. ಪ್ರತಿಯೊಬ್ಬರಿಗೂ ಒಂದೇ ಕವಿತೆ ವಾಚಿಸಲು ಅವಕಾಶ ನೀಡಲಾಗಿದೆ.ಭಾಗವಹಿಸುವವರು ತಮ್ಮ ಕವನದ ಎರಡು ಪ್ರತಿಗಳೊಂದಿಗೆ ಸಂಪೂರ್ಣ ವಿಳಾಸ ನಮೂದಿಸಿ, ಸ್ವರಚಿತ ಕವನವನ್ನು ಜೂನ್ 10, 2026ರೊಳಗೆ ಸಂಘಟಕರಿಗೆ ತಲುಪಿಸಬೇಕು ತಿಳಿಸಿದರು.

ಈ ಘೋಷ್ಟಿಯಲ್ಲಿ ಹೊರಾಟಗಾರರಾದ ಟಿ ಆರ್ ಕೃಷ್ಣಪ್ಪ , ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ಮುರುಳಿ ಕೆರೆಹಳ್ಳಿ , ನಾಥ್ ಬಳಗದ ಸಾಯಿನಾಥ್ ಭಂಡಾರಿ , ಸುರೇಶ್ ಸಿಂಗ್ , ಕುಕ್ಕಳಲೆ ಈಶ್ವರಪ್ಪ ಗೌಡ , ಕೆ ಅಬ್ಬಾಸ್ ಇದ್ದರು.

ಸಂಪರ್ಕಿಸಿ :

ನಾಗಭೂಷಣ ಅಧ್ಯಕ್ಷರು, ಕ.ಸಾ.ಪ 7483021975

ರಾ. ಸೋಮಶೇಖರ ಮಾಜಿ ಅಧ್ಯಕ್ಷರು, ಕ.ಸಾ.ಪ 9448726910

ಚೋಳರಾಜ್ ಸದಸ್ಯರು, ಕ.ಸಾ.ಪ 9449328741

ಸತೀಶ್ ಹೆಗಡೆ ಸದಸ್ಯರು, ಕ.ಸಾ.ಪ 9900991274

ರಾಮಚಂದ್ರ ಕಲಾಕೌಸ್ತುಭ ಕನ್ನಡ ಸಂಘ 9886442359

ಪ್ರೇಮನಾಥ ನಾಥ್ ಬಳಗ 9945084407

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

10 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

11 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

12 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

12 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago