ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ

ಭಾರಿ ಗಾಳಿ ಮಳೆ – ಹಾರಿ ಹೋದ ಸರ್ಕಾರಿ ಪಿಯು ಕಾಲೇಜಿನ ಮೇಲ್ಚಾವಣಿ , ತಪ್ಪಿದ ಭಾರಿ ಅನಾಹುತ

Heavy rain and strong winds caused severe damage in Ripponpet as the roof of the Government PU College auditorium was blown away and fell onto Kerehalli Road. Fortunately, no casualties were reported.

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸಂಜೆ ಸುರಿದ ಭಾರಿ ಗಾಳಿ ಮಳೆ ಅನಾಹುತಕ್ಕೆ ಕಾರಣವಾಗಿದ್ದು, ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ಸಂಪೂರ್ಣವಾಗಿ ಕಿತ್ತುಹಾರಿದ ಘಟನೆ ನಡೆದಿದೆ. ಭಾರೀ ಗಾಳಿಯ ತೀವ್ರತೆಗೆ ಸಭಾಂಗಣದ ಮೇಲ್ಚಾವಣಿಗೆ ಅಳವಡಿಸಲಾಗಿದ್ದ ಶೀಟ್‌ಗಳು ಹಾಗೂ ಕಬ್ಬಿಣದ ಆಂಗಲರ್‌ಗಳು ಹಾರಿ ಹೋಗಿ ಕೆರೆಹಳ್ಳಿ ರಸ್ತೆಯ ಮೇಲೆ ಬಿದ್ದಿವೆ.

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೇಲ್ಚಾವಣಿಯ ಅವಶೇಷಗಳು ರಸ್ತೆಯ ಮಧ್ಯೆ ಬಿದ್ದಿದ್ದರಿಂದ ಸಂಚಾರಕ್ಕೂ ಅಡಚಣೆ ಉಂಟಾಯಿತು. ಆದರೆ ಘಟನೆ ಸಂಭವಿಸಿದ ವೇಳೆಯಲ್ಲಿ ರಸ್ತೆಯಲ್ಲಿ ಸಾರ್ವಜನಿಕರು ಅಥವಾ ವಾಹನ ಸಂಚಾರ ಇಲ್ಲದಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ವಿಷಯ ತಿಳಿದ ಶಾಸಕ ಬೇಳೂರು ಗೋಪಾಲಕೃಷ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ, ರಸ್ತೆಗೆ ಬಿದ್ದಿರುವ ಅವಶೇಷಗಳನ್ನು ತಕ್ಷಣ ತೆರವುಗೊಳಿಸುವಂತೆ ಹಾಗೂ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ದುರಸ್ತಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಗ್ರಾಮ ಪಂಚಾಯತ್ ನಿಕಟ ಪೂರ್ವ ಸದಸ್ಯ ಆಸೀಫ್ ಭಾಷಾ, ನಿರೂಪ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಮೋರೇ ಸೇರಿದಂತೆ ಹಲವರು ಇದ್ದರು.

ಭಾರಿ ಗಾಳಿ ಮತ್ತು ಮಳೆಯ ಪರಿಣಾಮ ಪಟ್ಟಣದ ವಿವಿಧ ಭಾಗಗಳಲ್ಲಿ ಮರಗಳು ಉರುಳಿರುವುದು ಹಾಗೂ ವಿದ್ಯುತ್ ವ್ಯತ್ಯಯವೂ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

8 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

8 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

9 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

9 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

14 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

15 hours ago