RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ
A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station.
ಶಿಕಾರಿಪುರ : ಆನ್ಲೈನ್ ವಂಚಕರು RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
ಮೇ 8ರಂದು ಮಹಿಳಾ ಪೊಲೀಸ್ ಅಧಿಕಾರಿಯ ಮೊಬೈಲ್ ಸಂಖ್ಯೆಗೆ RTO ಚಲನ್ ಹೆಸರಿನಲ್ಲಿ APK ಫೈಲ್ ಬಂದಿತ್ತು. ವಾಹನಕ್ಕೆ ಸಂಬಂಧಿಸಿದ ದಂಡವಿರಬಹುದೆಂದು ಭಾವಿಸಿದ ಅವರು ಆ ಫೈಲ್ ಅನ್ನು ಓಪನ್ ಮಾಡಿದ್ದಾರೆ. ಆದರೆ, ಫೈಲ್ನಲ್ಲಿ ಯಾವುದೇ ಮಾಹಿತಿ ಕಾಣಿಸದ ಹಿನ್ನೆಲೆ ತಕ್ಷಣವೇ ಆ್ಯಪ್ನಿಂದ ಹೊರಬಂದಿದ್ದಾರೆ.
ಆದರೆ ಕೆಲವೇ ಕ್ಷಣಗಳಲ್ಲಿ ಅವರ ಮೊಬೈಲ್ಗೆ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗುತ್ತಿರುವ ಮೆಸೇಜ್ಗಳು ಬರತೊಡಗಿವೆ. ಹಂತ ಹಂತವಾಗಿ ಒಟ್ಟು ₹6,78,759 ಹಣ ಖಾತೆಯಿಂದ ವರ್ಗಾವಣೆಯಾಗಿರುವುದನ್ನು ಕಂಡು ಅವರು ಬೆಚ್ಚಿಬಿದ್ದಿದ್ದಾರೆ.
ತಕ್ಷಣವೇ ಎಚ್ಚೆತ್ತುಕೊಂಡ ಮಹಿಳಾ ಅಧಿಕಾರಿ, ಘಟನೆ ಕುರಿತು ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಂಚಕರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸೈಬರ್ ವಂಚಕರು APK ಫೈಲ್, ಲಿಂಕ್ ಹಾಗೂ ನಕಲಿ ಆ್ಯಪ್ಗಳ ಮೂಲಕ ಜನರ ಬ್ಯಾಂಕ್ ಮಾಹಿತಿಯನ್ನು ಕಳವು ಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್