Headlines

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ

Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive.

ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

ಪಟ್ಟಣದ ಮುಖ್ಯರಸ್ತೆಯ ಮೇಲೆಯೇ ಕೆಲವರು ವ್ಯಾಪಾರ ನಡೆಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ರಸ್ತೆ ಬದಿಗೆ ಸರಿದು ವ್ಯಾಪಾರ ನಡೆಸುವಂತೆ ಸೂಚನೆ ನೀಡಿದ್ದರು. ಸೂಚನೆ ಪಾಲಿಸದ ಹಿನ್ನೆಲೆ ಇಂದು ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡರು.

ಈ ವೇಳೆ ವ್ಯಾಪಾರಿಯೊಬ್ಬರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮಾರಾಟಕ್ಕೆ ಇಟ್ಟಿದ್ದ ಮಾವಿನಹಣ್ಣುಗಳನ್ನು ರಸ್ತೆಯ ಮಧ್ಯೆ ಸುರಿದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ನಂತರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ರಸ್ತೆಗೆ ಸುರಿದಿದ್ದ ಮಾವಿನಹಣ್ಣುಗಳನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಘಟನೆಯು ಸ್ಥಳೀಯರ ಗಮನ ಸೆಳೆದಿತು.

About The Author