ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ
Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered.
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಜುನಾಥ ನಾಯ್ಕ ಬಂಧಿತ ಆರೋಪಿ. ಈತನನ್ನು ದಸ್ತಗಿರಿ ಮಾಡಿರುವ ಪೊಲೀಸರು, ಆತನಿಂದ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಚಿನ್ನದ ಸರವನ್ನು ಜಪ್ತಿ ಮಾಡಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಕಳೆದ ಏಪ್ರಿಲ್ ೨೨ರಂದು ಸಂಜೆ ಯುವತಿಯೊಬ್ಬಳು ಕಾರಿನಿಂದ ಇಳಿಯುತ್ತಿದ್ದಾಗ, ಹಿಂಬದಿಯಿಂದ ಇಕೋ ಸ್ಪೋರ್ಟ್ (EcoSport) ಕಾರಿನಲ್ಲಿ ಬಂದಿದ್ದ ದುಷ್ಕರ್ಮಿ ಕ್ಷಣಾರ್ಧದಲ್ಲಿ ಆಕೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ ಪೊಲೀಸರು ಇದೀಗ ಆರೋಪಿಯನ್ನು ಕಾರು ಸಮೇತ ಹೆಡೆಮುರಿ ಕಟ್ಟಿದ್ದಾರೆ.
ಚಿನ್ನದ ಸರ: ೧.೫೦ ಲಕ್ಷ ರೂ. ಬೆಲೆಬಾಳುವ ೧೦ ಗ್ರಾಂ ತೂಕದ ಬಂಗಾರದ ಸರ , ಕೃತ್ಯಕ್ಕೆ ಬಳಸಿದ್ದ ೫ ಲಕ್ಷ ರೂ. ಮೌಲ್ಯದ ಇಕೋ ಸ್ಪೋರ್ಟ್ ಕಾರು.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ (ಪಿಐ) ರಾಘವೇಂದ್ರ ಕಾಂಡಿಕೆ ಹಾಗೂ ಪಿ.ಎಸ್.ಐ ನವೀನ್ ಮಠಪತಿ ಮತ್ತು ಠಾಣಾ ಸಿಬ್ಬಂದಿ ಪಾಲ್ಗೊಂಡಿದ್ದರು.
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…
ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್ಪೇಟೆಯಲ್ಲಿ ಎಎಸ್ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…