ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!
Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway.
ರಿಪ್ಪನ್ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು ರಿಪ್ಪನ್ಪೇಟೆ ಪೊಲೀಸರು ವಶಕ್ಕೆ ಪಡೆದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ದೂನ, ಬೆನವಳ್ಳಿ ಹಾಗೂ ಅರಸಾಳು ಗ್ರಾಮಗಳಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಅರಸಾಳು ಗ್ರಾಮದ ಮಾಣಿಕೆರೆ ಬಳಿಯ ಖಾಸಗಿ ಗದ್ದೆಯ ಪಕ್ಕದ ನೀಲಗಿರಿ ತೋಪಿನಲ್ಲಿ ಕೆಲವರು ಹಣ ಪಣಕ್ಕಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಯಿತು.
ಮಾಹಿತಿ ಆಧರಿಸಿ ಸ್ಥಳಕ್ಕೆ ದಿಢೀರ್ ದಾಳಿ ನಡೆಸಿದ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆದರು. ದಾಳಿಯ ವೇಳೆ ಆರೋಪಿಗಳಿಂದ ₹3,150 ನಗದು, 52 ಇಸ್ಪೀಟ್ ಎಲೆಗಳು, ಜೂಜಾಟಕ್ಕೆ ಬಳಸಿದ್ದ ಪ್ಲಾಸ್ಟಿಕ್ ಟಾರ್ಪಲ್ ಹಾಗೂ ಬೆಡ್ಶೀಟ್ ಅನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ಸಂಖ್ಯೆ 158/2026 ದಾಖಲಿಸಲಾಗಿದೆ. ಪ್ರಕರಣವು ಅಸಂಜ್ಞೇಯ ಸ್ವರೂಪದ್ದಾಗಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿರುದ್ಧ ವಿಧಿವತ್ತಾಗಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿಶ್ವನಾಥ್ , ರಾಮಚಂದ್ರ ಹಾಗೂ ಅವಿನಾಶ್ ಇದ್ದರು.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…