ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!
Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway.
ರಿಪ್ಪನ್ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು ರಿಪ್ಪನ್ಪೇಟೆ ಪೊಲೀಸರು ವಶಕ್ಕೆ ಪಡೆದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ದೂನ, ಬೆನವಳ್ಳಿ ಹಾಗೂ ಅರಸಾಳು ಗ್ರಾಮಗಳಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಅರಸಾಳು ಗ್ರಾಮದ ಮಾಣಿಕೆರೆ ಬಳಿಯ ಖಾಸಗಿ ಗದ್ದೆಯ ಪಕ್ಕದ ನೀಲಗಿರಿ ತೋಪಿನಲ್ಲಿ ಕೆಲವರು ಹಣ ಪಣಕ್ಕಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಯಿತು.
ಮಾಹಿತಿ ಆಧರಿಸಿ ಸ್ಥಳಕ್ಕೆ ದಿಢೀರ್ ದಾಳಿ ನಡೆಸಿದ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ 9 ಮಂದಿಯನ್ನು ವಶಕ್ಕೆ ಪಡೆದರು. ದಾಳಿಯ ವೇಳೆ ಆರೋಪಿಗಳಿಂದ ₹3,150 ನಗದು, 52 ಇಸ್ಪೀಟ್ ಎಲೆಗಳು, ಜೂಜಾಟಕ್ಕೆ ಬಳಸಿದ್ದ ಪ್ಲಾಸ್ಟಿಕ್ ಟಾರ್ಪಲ್ ಹಾಗೂ ಬೆಡ್ಶೀಟ್ ಅನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ಸಂಖ್ಯೆ 158/2026 ದಾಖಲಿಸಲಾಗಿದೆ. ಪ್ರಕರಣವು ಅಸಂಜ್ಞೇಯ ಸ್ವರೂಪದ್ದಾಗಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳ ವಿರುದ್ಧ ವಿಧಿವತ್ತಾಗಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿಶ್ವನಾಥ್ , ರಾಮಚಂದ್ರ ಹಾಗೂ ಅವಿನಾಶ್ ಇದ್ದರು.
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…
ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ Rituals of Rigveda Upakarma and Vishwakarma Yajna were…
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…