Categories: crime news

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

A lorry carrying 300 bags of rice worth ₹4.20 lakh has gone missing in Bhadravathi. Police have registered a case against the driver after the consignment failed to reach two rice mills.

ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ ಐಷರ್ (ಕ್ಯಾಂಟರ್) ವಾಹನ ನಾಪತ್ತೆಯಾಗಿರುವ ಘಟನೆ ಭದ್ರಾವತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ವಾಹನ ಚಾಲಕನ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾವತಿ ತಾಲೂಕಿನ ದೊಣಬಘಟ್ಟದ ವ್ಯಾಪಾರಿ ಎನ್. ಮಹಮ್ಮದ್ ಜಾಫರ್ ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಅವರು ಮಾಚೇನಹಳ್ಳಿಯ ಭಾರತೀಯ ಆಹಾರ ನಿಗಮದ (FCI) ಹರಾಜಿನಲ್ಲಿ ಅಕ್ಕಿಯನ್ನು ಖರೀದಿಸಿದ್ದರು.

ಜೂನ್ 3ರಂದು ದೊಣಬಘಟ್ಟದ ಗೋದಾಮಿನಿಂದ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಎಂ.ಎನ್. ಆಗ್ರೋ ರೈಸ್ ಮಿಲ್‌ಗೆ ₹2.80 ಲಕ್ಷ ಮೌಲ್ಯದ 200 ಚೀಲ ಅಕ್ಕಿ ಹಾಗೂ ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲೂಕಿನ ಬನ್ನೂರಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಮಾಡರ್ನ್ ರೈಸ್ ಮಿಲ್‌ಗೆ ₹1.40 ಲಕ್ಷ ಮೌಲ್ಯದ 100 ಚೀಲ ಅಕ್ಕಿಯನ್ನು ಬೆಂಗಳೂರಿನ ಕ್ಯಾಂಟರ್ ವಾಹನದ ಚಾಲಕ ಪ್ರೇಮಕುಮಾರ್ನ ವಾಹನದಲ್ಲಿ ಲೋಡ್ ಮಾಡಿ ಕಳುಹಿಸಲಾಗಿತ್ತು.

ಮರುದಿನ ಬೆಳಿಗ್ಗೆ ಚಾಲಕನನ್ನು ಸಂಪರ್ಕಿಸಿದಾಗ ವಾಹನ ಕೆಟ್ಟುಹೋಗಿದ್ದು, ದುರಸ್ತಿ ಮಾಡಿಸಿಕೊಂಡು ತೆರಳುವುದಾಗಿ ತಿಳಿಸಿದ್ದಾನೆ. ಆದರೆ ಸಂಜೆ ವೇಳೆಗೆ ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಬಳಿಕ ಯಾವುದೇ ಸಂಪರ್ಕ ಸಾಧ್ಯವಾಗಿಲ್ಲ.

ರೈಸ್ ಮಿಲ್‌ಗಳಿಗೆ ಅಕ್ಕಿ ತಲುಪದ ಹಿನ್ನೆಲೆಯಲ್ಲಿ ವಾಹನ ಹಾಗೂ ಚಾಲಕನಿಗಾಗಿ ಹುಡುಕಾಟ ನಡೆಸಿದ ವ್ಯಾಪಾರಿ ಮಹಮ್ಮದ್ ಜಾಫರ್, ಕೊನೆಗೆ ಚಾಲಕ ಪ್ರೇಮಕುಮಾರ್ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

8 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

8 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

9 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

20 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

21 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

21 hours ago