ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಉದ್ಯಮಿಗೆ ₹39.76 ಲಕ್ಷ ವಂಚನೆ; ಶಿವಮೊಗ್ಗ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು
A Bhadravathi-based businessman was allegedly duped of ₹39.76 lakh in an online trading investment scam. Shivamogga CEN Police have registered a case and launched an investigation.
ಶಿವಮೊಗ್ಗ, ಜೂನ್ 26: ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ನಂಬಿಸಿ ಭದ್ರಾವತಿಯ ಉದ್ಯಮಿಯೊಬ್ಬರಿಂದ ಬರೋಬ್ಬರಿ ₹39,76,171.41 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದೂರುದಾರ ಉದ್ಯಮಿ ಇನ್ಸ್ಟಾಗ್ರಾಮ್ ವೀಕ್ಷಿಸುತ್ತಿದ್ದ ವೇಳೆ ವಿವಿಧ ಕಂಪನಿಗಳ ಟ್ರೇಡಿಂಗ್ ಜಾಹೀರಾತುಗಳು ಕಾಣಿಸಿಕೊಂಡಿದ್ದವು. ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾಗಿ ಅವರು ಜಾಹೀರಾತಿನಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಮಾಹಿತಿಯನ್ನು ಹಂಚಿಕೊಂಡಿದ್ದರು.
ಬಳಿಕ ವಂಚಕರು, ಉದ್ಯಮಿಯ ಹೆಸರಿನಲ್ಲಿ ಡಿ-ಮ್ಯಾಟ್ ಖಾತೆ ತೆರೆಯಲಾಗುತ್ತದೆ ಎಂದು ತಿಳಿಸಿದ್ದರೂ, ಅದರ ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ಅನ್ನು ತಮ್ಮ ವಶದಲ್ಲೇ ಇಟ್ಟುಕೊಂಡು ವಂಚನೆ ನಡೆಸಿದ್ದಾರೆ ಎನ್ನಲಾಗಿದೆ.
ನಂತರ ದೂರುದಾರರನ್ನು ಟೆಲಿಗ್ರಾಂ ಗ್ರೂಪ್ಗೆ ಸೇರಿಸಿಕೊಂಡ ವಂಚಕರು, ಕ್ಯೂಆರ್ ಕೋಡ್ಗಳನ್ನು ಕಳುಹಿಸಿ 2023ರ ಜೂನ್ನಿಂದ 2026ರ ಮೇ ತಿಂಗಳವರೆಗೆ ಹಂತ ಹಂತವಾಗಿ ಒಟ್ಟು ₹39.76 ಲಕ್ಷಕ್ಕೂ ಅಧಿಕ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.
ದೂರುದಾರರು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಯತ್ನಿಸಿದಾಗ, “ಈಗ ಹಣ ತೆಗೆದರೆ ನಷ್ಟವಾಗುತ್ತದೆ” ಎಂದು ನಂಬಿಸಿ ಕಾಲಹರಣ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚೆಗೆ ತುರ್ತು ಹಣದ ಅಗತ್ಯ ಉಂಟಾದ ಹಿನ್ನೆಲೆಯಲ್ಲಿ ಹೂಡಿಕೆ ಮುಕ್ತಾಯಗೊಳಿಸಿ ಹಣ ವಾಪಸ್ ನೀಡುವಂತೆ ಕೇಳಿದಾಗ, ವಂಚಕರು ಡಿ-ಮ್ಯಾಟ್ ಖಾತೆಯನ್ನು ಸ್ಥಗಿತಗೊಳಿಸಿ ಸಂಪರ್ಕವನ್ನೇ ಕಡಿತಗೊಳಿಸಿದ್ದಾರೆ. ಇದರಿಂದ ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದ ದೂರುದಾರರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರ ಪತ್ತೆಗೆ ಮುಂದಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…