ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು
A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert.
ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಹಾರೋಗೊಪ್ಪ ತಾಂಡಾ ನಿವಾಸಿ ಮಂಜುನಾಥ್ ಆರ್ (32) ಎಂದು ಗುರುತಿಸಲಾಗಿದೆ. ಅವರು ಅಡುಗೆ ಕೆಲಸ ಮಾಡುತ್ತಿದ್ದು, ಜೂನ್ 18ರಂದು ತಮ್ಮ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ನಲ್ಲಿ ಶಿಕಾರಿಪುರಕ್ಕೆ ಕೆಲಸದ ನಿಮಿತ್ತ ತೆರಳಿದ್ದರು.
ಕೆಲಸ ಮುಗಿಸಿಕೊಂಡು ರಾತ್ರಿ ವೇಳೆ ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ತರಲಗಟ್ಟ ಗ್ರಾಮದ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿ ಕಟ್ಟೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಂಜುನಾಥ್ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…