RIPPONPETE | ಬಾವಿಯ ಮೋಟಾರ್ ಸಂಪರ್ಕಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
A 59-year-old labourer from Donanduru village in Hosanagara taluk died after accidentally coming into contact with electricity while connecting a motor pump. Ripponpet Police have registered a UDR case.
ರಿಪ್ಪನ್ ಪೇಟೆ ಜೂನ್ 22: ವಿದ್ಯುತ್ ಮೋಟಾರ್ ಸಂಪರ್ಕಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು ಗ್ರಾಮದ ದೊಣಂದೂರಿನಲ್ಲಿ ನಡೆದಿದೆ.
ದೊಣಂದೂರು ನಿವಾಸಿ ಕೃಷ್ಣಪ್ಪ (59) ಮೃತರು. ಇವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಸುಮಾರು ಮೂರು ವರ್ಷಗಳ ಹಿಂದೆ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಭಾನುವಾರ ಬೆಳಗ್ಗೆ ಮನೆಯ ಹಿಂಭಾಗದಲ್ಲಿ ಬಾವಿ ತೋಡುವ ಕಾಮಗಾರಿ ನಡೆಯುತ್ತಿತ್ತು. ಬಾವಿಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರತೆಗೆದು ಖಾಲಿ ಮಾಡಲು ಮೋಟಾರ್ ಚಾಲನೆ ನೀಡುವ ಉದ್ದೇಶದಿಂದ ಕೃಷ್ಣಪ್ಪ ಅವರು ಮೋಟಾರ್ ವೈರನ್ನು ಮನೆಯ ಅಡುಗೆಮನೆಯ ಸ್ವಿಚ್ಗೆ ಸಂಪರ್ಕಿಸಲು ಮುಂದಾಗಿದ್ದರು.
ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಅವರ ಬಲಗೈಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಪತ್ನಿ ವೇದಾವತಿ ಹಾಗೂ ಸ್ಥಳದಲ್ಲಿದ್ದ ಕಾರ್ಮಿಕರ ಸಹಾಯದಿಂದ ಅವರನ್ನು ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮೃತರ ಪತ್ನಿ ವೇದಾವತಿ ನೀಡಿದ ದೂರಿನ ಮೇರೆಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…