ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ!

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ!

Farmer Abhilash B from Punaje village in Hosanagara has lodged a complaint alleging quality issues in an agricultural product used in his arecanut plantation, seeking laboratory testing and official investigation.

ಹೊಸನಗರ: ತಾಲೂಕಿನ ಪುಣಜೆ ಗ್ರಾಮದ ರೈತ ಹಾಗೂ ಯುವ ಮುಖಂಡ ಅಭಿಲಾಶ್ ಬಿ ಚಿಕ್ಕಮಣತಿ ಅವರು ಕೃಷಿ ಉತ್ಪನ್ನವೊಂದರ ಗುಣಮಟ್ಟದ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ತಾಲೂಕು ಕೃಷಿ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ರೈತ ಅಭಿಲಾಶ್ ಬಿ ಅವರು ಜೂನ್ 8 ರಂದು ಹೊಸನಗರದ ಖಾಸಗಿ ಕೃಷಿ ಉಪಕರಣಗಳ ಅಂಗಡಿಯಿಂದ AMRUTH ಕಂಪನಿಯ ALCARE ಎಂಬ ಕೃಷಿ ಉತ್ಪನ್ನವನ್ನು ಖರೀದಿಸಿದ್ದರು. ಅಂಗಡಿ ಮಾಲೀಕರು ಈ ಉತ್ಪನ್ನದಲ್ಲಿ ಬೇವಿನ ಎಣ್ಣೆಯ ಅಂಶವಿದ್ದು ಅಡಿಕೆ ಬೆಳೆಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದು ತಿಳಿಸಿ ಮಾರಾಟ ಮಾಡಿದ್ದರು ಎಂದು ಅವರು ಹೇಳಿದ್ದಾರೆ.

ಆದರೆ ಜೂನ್ 9 ರಂದು ತೋಟದಲ್ಲಿ ಸಿಂಪಡಣೆ ಮಾಡುವ ವೇಳೆ ಒಂದೇ ಬ್ಯಾಚ್‌ನ ಬಾಟಲಿಗಳಲ್ಲಿದ್ದ ಮಿಶ್ರಣದ ಬಣ್ಣದಲ್ಲಿ ಅಸಾಮಾನ್ಯ ವ್ಯತ್ಯಾಸ ಕಂಡುಬಂದಿದ್ದು, ಉತ್ಪನ್ನದ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಕಂಪನಿ ಹಾಗೂ ಮಾರಾಟಗಾರರಿಗೆ ಮಾಹಿತಿ ನೀಡಿದ ಬಳಿಕ ಅವರ ಪ್ರತಿನಿಧಿಗಳು ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಪರಿಶೀಲನೆ ವೇಳೆ ಉತ್ಪನ್ನದಲ್ಲಿ ಪ್ರಮುಖ ಅಂಶವಾಗಿರಬೇಕಾದ ಬೇವಿನ ಎಣ್ಣೆ (Neem Oil) ಇಲ್ಲದಿರುವುದನ್ನು ಕಂಪನಿಯ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ ಎಂದು ರೈತ ಅಭಿಲಾಶ್ ಆರೋಪಿಸಿದ್ದು, ಈ ಸಂಬಂಧದ ದೂರವಾಣಿ ಸಂಭಾಷಣೆಯ ಧ್ವನಿಮುದ್ರಣ ತಮ್ಮ ಬಳಿ ಇರುವುದಾಗಿ ತಿಳಿಸಿದ್ದಾರೆ.

ಸುಮಾರು ಎರಡು ಎಕರೆ ಅಡಿಕೆ ತೋಟಕ್ಕೆ ಈ ಉತ್ಪನ್ನವನ್ನು ಬಳಸಲಾಗಿದ್ದು, ಸಿಂಪಡಣೆ ಬಳಿಕ ಕೆಲವು ಮರಗಳಲ್ಲಿ ಅಸಾಮಾನ್ಯ ಪ್ರಮಾಣದಲ್ಲಿ ಅಡಿಕೆ ಮಣಿ ಉದುರುವಿಕೆ ಕಂಡುಬಂದಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದರಿಂದ ಬೆಳೆ ಸುರಕ್ಷತೆ ಹಾಗೂ ಉತ್ಪನ್ನದ ಗುಣಮಟ್ಟದ ಬಗ್ಗೆ ಮತ್ತಷ್ಟು ಅನುಮಾನಗಳು ವ್ಯಕ್ತವಾಗಿವೆ.

ಈ ಹಿನ್ನೆಲೆಯಲ್ಲಿ ತಾಲೂಕು ಕೃಷಿ ಅಧಿಕಾರಿಗಳಿಗೆ ದೂರು ಸಲ್ಲಿಸಿರುವ ರೈತರು, ಉತ್ಪನ್ನದ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿ ಅದರ ಗುಣಮಟ್ಟ, ನೋಂದಣಿ, ಅನುಮತಿ ಹಾಗೂ ಕಾನೂನುಬದ್ಧತೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ರೈತರಿಗೆ ತಪ್ಪು ಮಾಹಿತಿ ನೀಡಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡಿರುವುದು ಸಾಬೀತಾದಲ್ಲಿ ತಯಾರಕ ಕಂಪನಿ, ವಿತರಕರು ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈತ ಅಭಿಲಾಶ್ ಬಿ ಒತ್ತಾಯಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

13 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

15 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

15 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

15 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

2 days ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago