HOSANAGARA | ಟ್ರ್ಯಾಕ್ಟರ್ – ಕಾರು ನಡುವೆ ಡಿಕ್ಕಿ – ಮೂವರಿಗೆ ಗಾಯ , ಮೆಗ್ಗಾನ್ ಗೆ ದಾಖಲು
Three people were injured in a head-on collision between a tractor and a car near Marakutika Cross on Kollur National Highway in Hosanagara. The injured have been admitted to Shivamogga Meggan Hospital.
ಹೊಸನಗರ, ಜೂನ್ 12: ತಾಲೂಕಿನ ಮೂಲಕ ಹಾದುಹೋಗಿರುವ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಮರಕುಟಿಕ ಕ್ರಾಸ್ ಸಮೀಪ ಟ್ರಾಕ್ಟರ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡ ಘಟನೆ ನಡೆದಿದೆ.
ಸಾಗರದ ಜೆ.ಪಿ. ನಗರ ನಿವಾಸಿ ಅರುಣ್ ಕುಮಾರ್ ಅವರು ತಮ್ಮ ಕುಟುಂಬ ಸದಸ್ಯರಾದ ತಾತ ಆನಂದ್ (80), ತಾಯಿ ನಾಗರತ್ನ (51) ಹಾಗೂ ಅಜ್ಜಿ ರುಕ್ಮಿಣಿ (65) ಅವರೊಂದಿಗೆ ಬೆನ್ನಟ್ಟೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ನಿಟ್ಟೂರು ಕಡೆಯಿಂದ ವೇಗವಾಗಿ ಬಂದ ಟ್ರಾಕ್ಟರ್ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಟ್ರಾಕ್ಟರ್ನ ಒಂದು ಚಕ್ರ ಕಾರಿನ ಮುಂಭಾಗದ ಮೇಲೆ ಹತ್ತಿದ್ದು, ಬಳಿಕ ಟ್ರಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಮಿಣಿ ಗಾಯಗೊಂಡಿದ್ದಾರೆ.
ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಅವರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…