ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ
Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days.
ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ ಇದೆ. ಉಡುಪಿ ಹಾಗೂ ಕುಂದಾಪುರ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿರುವ ಈ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಲಘು ವಾಹನಗಳು ಹಾಗೂ ಬಸ್ಗಳ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಘಾಟಿ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಏಪ್ರಿಲ್ ತಿಂಗಳಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಭೂಕುಸಿತ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ರಸ್ತೆಯ ಸುರಕ್ಷತೆ ಹಾಗೂ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ಅಧಿಕಾರಿಗಳ ವರದಿ ಆಧರಿಸಿ ಪ್ರಥಮ ಹಂತದಲ್ಲಿ ಲಘು ವಾಹನಗಳು ಮತ್ತು ಬಸ್ಗಳ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.
ಈ ನಡುವೆ ಹುಲಿಕಲ್ ಘಾಟಿ ರಸ್ತೆ ಪುನರಾರಂಭದ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಪ್ರಯಾಣಿಕರು ಹಾಗೂ ಸ್ಥಳೀಯರು ರಸ್ತೆ ತೆರೆಯುವ ದಿನಾಂಕಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…