ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ
The Annual General Meeting of Huncha Primary Agricultural Credit Cooperative Society for 2023-24 and 2024-25 was held successfully. President Raghavendra Totadakattu urged farmers to repay crop and medium-term loans on time and support the society’s growth.
ರಿಪ್ಪನ್ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಯಶಸ್ವಿಯಾಗಿ ನಡೆಯಿತು.
ಸಂಘದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ ಈ ಹಿಂದಿನ ಅವಧಿಯಲ್ಲಿ ಉಂಟಾಗಿದ್ದ ನಷ್ಟದ ಕುರಿತು ಸದಸ್ಯರ ಸಮ್ಮುಖದಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಸಂಘವನ್ನು ಅಭಿವೃದ್ಧಿಯೊಂದಿಗೆ ಲಾಭದಾಯಕ ಸಂಸ್ಥೆಯನ್ನಾಗಿ ರೂಪಿಸಲು ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರೈತರು ಸಂಘದಿಂದ ಪಡೆದಿರುವ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಸಂಘದ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಷೇರುದಾರರು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಎಸ್. ವಾರ್ಷಿಕ ವರದಿ ಹಾಗೂ ಆರ್ಥಿಕ ವಿವರಗಳನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಸಂಘದ ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್