Categories: crime news

ಇನ್‌ಸ್ಟಾಗ್ರಾಮ್ ಜಾಹೀರಾತು ನಂಬಿದ ಯುವ ರೈತನಿಗೆ 2.05 ಕೋಟಿ ರೂ. ವಂಚನೆ!

ಇನ್‌ಸ್ಟಾಗ್ರಾಮ್ ಜಾಹೀರಾತು ನಂಬಿದ ಯುವ ರೈತನಿಗೆ 2.05 ಕೋಟಿ ರೂ. ವಂಚನೆ!

A young farmer from Bhadravathi lost ₹2.05 crore in a massive cyber fraud after trusting an Instagram trading advertisement. The scammers used fake demat accounts, Telegram groups and false profit claims to cheat him over three years.

ಶಿವಮೊಗ್ಗ, ಜೂನ್ 20: ಇನ್‌ಸ್ಟಾಗ್ರಾಮ್‌ನಲ್ಲಿ ಕಾಣಿಸಿಕೊಂಡ ಟ್ರೇಡಿಂಗ್ ಜಾಹೀರಾತು ನಂಬಿ ಹಣ ಹೂಡಿಕೆ ಮಾಡಿದ ಭದ್ರಾವತಿಯ ಯುವ ರೈತರೊಬ್ಬರು ಬರೋಬ್ಬರಿ 2 ಕೋಟಿ 5 ಲಕ್ಷ ರೂಪಾಯಿ ಕಳೆದುಕೊಂಡಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು 2023ರ ಜನವರಿಯಲ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆ ವೀಕ್ಷಿಸುತ್ತಿದ್ದ ವೇಳೆ “Xness” ಕಂಪನಿಯ ಲೋಗೋ ಬಳಸಿ ಪ್ರಕಟಿಸಲಾಗಿದ್ದ ಟ್ರೇಡಿಂಗ್ ಜಾಹೀರಾತನ್ನು ಗಮನಿಸಿದ್ದರು. ಕೆಲವೇ ದಿನಗಳಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಭರವಸೆ ನೀಡಿದ್ದ ಜಾಹೀರಾತಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ಬಳಿಕ, ನಕಲಿ ವೆಬ್‌ಸೈಟ್ ತೆರೆಯಲ್ಪಟ್ಟಿದೆ.
ಅದರ ಮೂಲಕ ದೂರುದಾರರ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡ ವಂಚಕರು, ಅವರ ಹೆಸರಿನಲ್ಲಿ ನಕಲಿ ಡಿ-ಮ್ಯಾಟ್ ಖಾತೆಯನ್ನು ಸೃಷ್ಟಿಸಿದ್ದಾರೆ. ಆದರೆ ಅದರ ಲಾಗಿನ್ ವಿವರಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು, ದೊಡ್ಡ ಮೊತ್ತದ ಹೂಡಿಕೆ ಸಂದರ್ಭದಲ್ಲಿ ಮಾತ್ರ ನೀಡುವುದಾಗಿ ನಂಬಿಸಿದ್ದಾರೆ.

ನಂತರ ದೂರುದಾರರನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಿದ ವಂಚಕರು, ನಕಲಿ ಗ್ರಾಹಕರ ಖಾತೆಗಳನ್ನು ತೋರಿಸಿ ಭಾರೀ ಲಾಭ ಗಳಿಸಿರುವಂತೆ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ವಿವಿಧ ಬ್ಯಾಂಕ್ ಖಾತೆಗಳ ಕ್ಯೂಆರ್ ಕೋಡ್ ಹಾಗೂ ಯುಪಿಐ ಲಿಂಕ್‌ಗಳನ್ನು ಕಳುಹಿಸಿ ನಿರಂತರವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ.

ಇದನ್ನು ನಂಬಿದ ರೈತ ಯುವಕ 2023ರ ಜನವರಿಯಿಂದ 2026ರ ಏಪ್ರಿಲ್‌ವರೆಗೆ ಹಂತ ಹಂತವಾಗಿ ಒಟ್ಟು ₹2,05,00,000 ಹಣವನ್ನು ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದಾರೆ.

ಮಧ್ಯಂತರದಲ್ಲಿ ಹಣ ವಾಪಸ್ ಪಡೆಯಲು ಪ್ರಯತ್ನಿಸಿದಾಗ, ಈಗಲೇ ಹಣ ಹಿಂಪಡೆದರೆ ಭಾರಿ ನಷ್ಟವಾಗುತ್ತದೆ, ಇನ್ನೂ ಕೆಲ ದಿನ ಕಾಯಿದರೆ ಕೋಟ್ಯಂತರ ರೂಪಾಯಿ ಲಾಭ ಸಿಗುತ್ತದೆ ಎಂದು ಹೇಳಿ ವಂಚಕರು ಅವರನ್ನು ನಂಬಿಸುತ್ತಾ ಬಂದಿದ್ದಾರೆ.

ಆದರೆ 2026ರ ಏಪ್ರಿಲ್‌ನಲ್ಲಿ ವೈಯಕ್ತಿಕ ಅಗತ್ಯಕ್ಕಾಗಿ ಹಣ ವಾಪಸ್ ನೀಡುವಂತೆ ಒತ್ತಾಯಿಸಿದಾಗ, ವಂಚಕರು ದೂರುದಾರರ ಹೆಸರಿನಲ್ಲಿದ್ದ ಡಿ-ಮ್ಯಾಟ್ ಖಾತೆಯನ್ನು ಬ್ಲಾಕ್ ಮಾಡಿ ಸಂಪರ್ಕಕ್ಕೆ ಸಿಗದಂತೆ ನಾಪತ್ತೆಯಾಗಿದ್ದಾರೆ. ಆಗ ತಾನು ಸೈಬರ್ ವಂಚಕರ ಬಲೆಗೆ ಬಿದ್ದಿರುವುದು ರೈತ ಯುವಕರಿಗೆ ಅರಿವಾಗಿದೆ.

ಈ ಕುರಿತು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

16 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

16 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

16 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

19 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

23 hours ago