ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ
Three youths from Thirthahalli have been booked in a suo motu case for entering the prohibited area at Jog Falls, filming Instagram Reels, and uploading dangerous videos on social media.
ಶಿವಮೊಗ್ಗ: ಜೋಗ ಜಲಪಾತದ ನಿಷೇಧಿತ ಹಾಗೂ ಅಪಾಯಕಾರಿ ಪ್ರದೇಶಕ್ಕೆ ತೆರಳಿ ರೀಲ್ಸ್ (Reels) ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಮೂವರು ಯುವಕರ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸುಮುಟೋ (ಸ್ವಯಂ ಪ್ರೇರಿತ) ಪ್ರಕರಣ ದಾಖಲಾಗಿದೆ.
ಜೋಗ ಜಲಪಾತದ ರಾಜಾ ಫಾಲ್ಸ್ ಪ್ರದೇಶವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ವ್ಯಾಪ್ತಿಗೆ ಸೇರಿದ್ದು, ಇದು ಅತ್ಯಂತ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಮೂವರು ಯುವಕರು ಅಲ್ಲಿಗೆ ತೆರಳಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಜೂನ್ 29, 2026ರಂದು ಮಧ್ಯಾಹ್ನ 2:30ಕ್ಕೆ ಸಿದ್ದಾಪುರ ಪೊಲೀಸ್ ಠಾಣೆಯ ಎಸ್ಐ ಶಾಂತಿನಾಥ ಕೆ. ಪಾಸಾನೆ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS)–2023ರ ಸೆಕ್ಷನ್ 125 ಹಾಗೂ 3(5) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
‘ಮಿಸ್ಟರ್ ಕನ್ನಡಿಗ’ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮೂರು ದಿನಗಳ ಹಿಂದೆ ಅಪ್ಲೋಡ್ ಮಾಡಲಾಗಿದ್ದ ಎರಡು ವಿಡಿಯೋಗಳಲ್ಲಿ, ಜೋಗ ಜಲಪಾತದ ರಾಜಾ ಫಾಲ್ಸ್ನ ಅಪಾಯಕಾರಿ ಕಲ್ಲಿನ ಬಂಡೆಗಳ ಮೇಲೆ ಓಡಾಡುತ್ತಾ ಚಿತ್ರೀಕರಣ ಮಾಡಿರುವುದು ಕಂಡುಬಂದಿದೆ.
ವಿಡಿಯೋದಲ್ಲಿ “ಜೋಗ ಫಾಲ್ಸ್ ಎಷ್ಟು ಎತ್ತರದಿಂದ ನೀರು ಬೀಳುತ್ತದೆ, ಕೆಳಗಡೆ ಫುಲ್ ಪ್ರಪಾತ, ನೆಕ್ಸ್ಟ್ ಲೆವೆಲ್ ವ್ಯೂ” ಎಂದು ಹೇಳುತ್ತಾ ಅಪಾಯಕಾರಿ ಪ್ರದೇಶದಲ್ಲಿ ಸಂಚರಿಸಿರುವ ದೃಶ್ಯಗಳಿವೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ವೇಳೆ ಈ ವಿಡಿಯೋ ಪೊಲೀಸ್ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ತನಿಖೆ ನಡೆಸಿದಾಗ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿರುವುದು ದೃಢಪಟ್ಟಿದೆ.
ಮಾವಿನಗುಂಡಿ ಸಮೀಪದ ಬ್ರಿಟಿಷ್ ಬಂಗಲೆ ಬಳಿ ಇರುವ ಜಲಪಾತದ ತುದಿ ಹಾಗೂ ಕಲ್ಲಿನ ಬಂಡೆಗಳ ಪ್ರದೇಶಕ್ಕೆ ಪ್ರವೇಶಿಸುವುದು ಜೀವಕ್ಕೆ ಅಪಾಯಕಾರಿಯಾಗಿದೆ. ಈ ಕುರಿತು ಎಚ್ಚರಿಕೆ ಫಲಕಗಳು ಹಾಗೂ ಪ್ರವೇಶ ನಿಷೇಧ ಸೂಚನೆಗಳನ್ನು ಅಳವಡಿಸಲಾಗಿದ್ದರೂ ಆರೋಪಿಗಳು ನಿಯಮ ಉಲ್ಲಂಘಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇಂತಹ ವಿಡಿಯೋಗಳನ್ನು ವೀಕ್ಷಿಸುವ ಇತರೆ ಪ್ರವಾಸಿಗರು ಸಹ ಅಪಾಯಕಾರಿ ಸಾಹಸಗಳಿಗೆ ಪ್ರೇರೇಪಿತರಾಗುವ ಸಾಧ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…