Categories: Education

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್

Free police recruitment training and guidance workshop to be held in Shivamogga on July 1 by Sarji Foundation and JCI Shivamogga Malnad. Candidates will also get access to a 30-day free online coaching program through Kayakasethu.

ಶಿವಮೊಗ್ಗ, ಜೂನ್ 25: ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ಸೇರುವ ಕನಸು ಹೊಂದಿರುವ ಯುವಕರಿಗೆ ಸುವರ್ಣಾವಕಾಶ ಒದಗಿಸುವ ಉದ್ದೇಶದಿಂದ ನಗರದ ಸರ್ಜಿ ಫೌಂಡೇಶನ್ ಹಾಗೂ ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜುಲೈ 1ರಂದು ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಶಾಸಕ ಡಾ. ಧನಂಜಯ ಸರ್ಜಿ, ಜಿಲ್ಲೆಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗಾಗಿ ಜುಲೈ 1ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಒಂದು ದಿನದ ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತಜ್ಞರಾದ ಸೋಮಪ್ಪ ಡುಂಡಿಗೆರೆ ಹಾಗೂ ನಾಗರಾಜ್ ರೆಡ್ಡಿ ಭಾಗವಹಿಸಿ, ಇತ್ತೀಚಿನ ಪರೀಕ್ಷಾ ಮಾದರಿ, ಪ್ರಶ್ನೆಪತ್ರಿಕೆ ವಿಶ್ಲೇಷಣೆ, ದೈಹಿಕ ಪರೀಕ್ಷೆಯ ವಿಧಾನಗಳು, ಪಠ್ಯಕ್ರಮ, ಪರೀಕ್ಷೆ ಎದುರಿಸುವ ತಂತ್ರಗಳು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ಇತ್ತೀಚಿನ ಬದಲಾವಣೆಗಳ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ.

30 ದಿನಗಳ ಉಚಿತ ಆನ್‌ಲೈನ್ ತರಬೇತಿ

ಕಾರ್ಯಾಗಾರದ ಬಳಿಕ “ಕಾಯಕಸೇತು ಪರೀಕ್ಷಾಪಥ” ಹೆಸರಿನ 30 ದಿನಗಳ ಉಚಿತ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜೂನ್ 29ರಿಂದ ಆರಂಭವಾಗಲಿರುವ ಈ ತರಬೇತಿಯಲ್ಲಿ ಪ್ರತಿದಿನ ಬೆಳಿಗ್ಗೆ 2 ಗಂಟೆ ಹಾಗೂ ಸಂಜೆ 2 ಗಂಟೆಗಳ ಕಾಲ ಅನುಭವಿ ಉಪನ್ಯಾಸಕರಿಂದ ಪಾಠ ಮಾಡಲಾಗುತ್ತದೆ.

ಅಭ್ಯರ್ಥಿಗಳ ಪ್ರಗತಿ ಪರಿಶೀಲನೆ ಹಾಗೂ ಸಮಯ ನಿರ್ವಹಣಾ ಕೌಶಲ್ಯ ವೃದ್ಧಿಗಾಗಿ ಪ್ರತಿದಿನ ಹಾಗೂ ವಾರಕ್ಕೊಮ್ಮೆ ಟೆಸ್ಟ್ ಸೀರೀಸ್‌ಗಳನ್ನು ನಡೆಸಲಾಗುವುದು. ಜೊತೆಗೆ, ಭಾಗವಹಿಸುವವರಿಗೆ ಡಿಜಿಟಲ್ ರೂಪದಲ್ಲಿ ಸಮಗ್ರ ಸ್ಟಡಿ ಮೆಟೀರಿಯಲ್‌ಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.

ಗ್ರಾಮೀಣ ಅಭ್ಯರ್ಥಿಗಳಿಗೆ ನೆರವು

ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಅಭ್ಯರ್ಥಿಗಳಿಗೆ ದುಬಾರಿ ತರಬೇತಿ ಕೇಂದ್ರಗಳ ವೆಚ್ಚವನ್ನು ತಪ್ಪಿಸಿ, ಗುಣಮಟ್ಟದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. 30 ದಿನಗಳ ಉಚಿತ ಆನ್‌ಲೈನ್ ತರಬೇತಿಗೆ ಕೇವಲ 1,000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಕಾಯಕಸೇತು ಜಾಬ್ ಪೋರ್ಟಲ್ ಮೂಲಕ ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿತ ಅರ್ಹ ಪದವೀಧರ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಇದೇ ವೇಳೆ, ಜೂನ್ 8ರಿಂದ 13ರವರೆಗೆ ನಡೆದ ಕಾಯಕಸೇತು ಉದ್ಯೋಗ ಸಂದರ್ಶನ ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 404 ಮಂದಿ ಆಯ್ಕೆಯಾಗಿ ನೇಮಕಾತಿ ಪತ್ರ ಪಡೆದಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಕಾಯಕಸೇತು ಜಾಬ್ ಪೋರ್ಟಲ್ ಮೂಲಕ 544 ಯುವಕರಿಗೆ ಉದ್ಯೋಗ ದೊರೆತಿದೆ ಎಂದು ಮಾಹಿತಿ ನೀಡಲಾಯಿತು.

ಸುದ್ದಿಗೋಷ್ಠಿಯಲ್ಲಿ ಜೆಸಿಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷ ಘನಶ್ಯಾಮ್ ಜಿ. ಗಿರಿಮಾಜಿ, ಕಾರ್ಯಕ್ರಮ ಕಾರ್ಯಾಧ್ಯಕ್ಷ ವಿಕಾಸ್ ಹೆಗ್ಡೆ ಹಾಗೂ ಪೂರ್ವ ವಲಯ ಅಧಿಕಾರಿ ಜೆ.ಸಿ. ಕಿರಣ್ ಕುಮಾರ್ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ: 7812926702 ಸಂಪರ್ಕಿಸಬಹುದು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

18 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

18 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

19 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

20 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

1 day ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

1 day ago