₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ
Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered.
ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ ಮೆಹಬೂಬ್ ಸಾಬ್ ಹಾಗೂ ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳ್ಳತನಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು ₹4.50 ಲಕ್ಷ ಮೌಲ್ಯದ 9 ಕ್ವಿಂಟಾಲ್ ಅಡಿಕೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಮೇ 4ರಂದು ರಂಜದಕಟ್ಟೆಯ ಅಡಿಕೆ ವ್ಯಾಪಾರಿ ಅಶ್ರಫ್ ಅವರ ಮನೆಯಲ್ಲಿ ಅಡಿಕೆ ಕಳ್ಳತನ ನಡೆದಿತ್ತು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…