RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment.

ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ಭಾನುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ರಿಪ್ಪನ್ ಪೇಟೆ ಸಮೀಪದ ಅಡಿಕಟ್ಟು ಗ್ರಾಮದ ನಿವಾಸಿ ರೋಹನ್ ಅವರು ಬರುತ್ತಿದ್ದ ವೇಳೆ, ರಿಪ್ಪನ್ ಪೇಟೆಯಿಂದ ಕರಡಿಗ ಗ್ರಾಮದ ಕಡೆಗೆ ಹಿರೋ ಹೋಂಡಾ ಸ್ಪ್ಲೆಂಡರ್ ಬೈಕ್‌ನಲ್ಲಿ ತೆರಳುತ್ತಿದ್ದ ಓಂಕೇಶಪ್ಪ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ಬೈಕ್‌ಗಳು ರಸ್ತೆಯ ಮೇಲೆ ಚದರಿಹೋಗಿದ್ದು, ಬೈಕ್ ಸವಾರ ರೋಹನ್ ಅವರ ಬಲಗಾಲಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತಕ್ಷಣ ಸ್ಥಳೀಯರು ಗಾಯಾಳುವಿಗೆ ನೆರವು ನೀಡಿ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರು. ಅಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನೊಬ್ಬ ಬೈಕ್ ಸವಾರ ಓಂಕೇಶಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

19 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago