ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction.

​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ, ಶಿವಮೊಗ್ಗ, ಸಾಗರ ಮತ್ತು ತೀರ್ಥಹಳ್ಳಿ ರಸ್ತೆಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಒತ್ತುವರಿ ತೆರವಿಗೆ ಡೆಡ್‌ಲೈನ್ ನೀಡಲಾಗಿದೆ..

​ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಪಿಡಬ್ಲ್ಯೂಡಿ ಅಧಿಕಾರಿಗಳು, ವರ್ತಕರು ಹಾಗೂ ಸಾರ್ವಜನಿಕರ ನಡುವೆ ನಡೆದ ಸಮಾಲೋಚನಾ ಸಭೆಯಲ್ಲಿ ಈ ಕೆಳಗಿನ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

ಹೊಸನಗರ ವೃತ್ತ ನಿರೀಕ್ಷಕ (ಸಿಪಿಐ) ಎಂ.ಎಸ್. ಗೌಡಪ್ಪ ಗೌಡರ್ ಅವರು ಸಭೆಯಲ್ಲಿ ಮಾತನಾಡಿ, ಟ್ರಾಫಿಕ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

​ನೋ ಪಾರ್ಕಿಂಗ್: ವಿನಾಯಕ ವೃತ್ತದ 75 ಅಡಿ ವ್ಯಾಪ್ತಿಯಲ್ಲಿ ಬಸ್ ಹೊರತುಪಡಿಸಿ ಬೇರೆ ಯಾವುದೇ ವಾಹನಗಳನ್ನು ನಿಲ್ಲಿಸುವಂತಿಲ್ಲ. (ಬಸ್‌ಗಳಿಗೆ ಕೇವಲ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮತ್ತು ಇಳಿಸಲು ಮಾತ್ರ ಅವಕಾಶ).

​ನಾಲ್ಕು ಚಕ್ರದ ವಾಹನಗಳು: ಕಾರು ಹಾಗೂ ಇತರ ನಾಲ್ಕು ಚಕ್ರದ ವಾಹನಗಳನ್ನು ವೃತ್ತದಿಂದ 100 ಮೀಟರ್ ಅಂತರದಲ್ಲಿ ಪ್ರತ್ಯೇಕವಾಗಿ ನಿಲ್ಲಿಸಬೇಕು.
​ದ್ವಿಚಕ್ರ ವಾಹನಗಳು: ಬೈಕ್‌ಗಳನ್ನು ರಸ್ತೆ ವಿಭಜಕದ (ಡಿವೈಡರ್) ಎರಡೂ ಬದಿಗಳಲ್ಲಿ ಮಾತ್ರ ಪಾರ್ಕ್ ಮಾಡಬೇಕು.

​ಎಚ್ಚರಿಕೆ: ಪಿಡಬ್ಲ್ಯೂಡಿ ಇಲಾಖೆ ಬಿಳಿ ಬಣ್ಣದ ಗುರುತು ಹಾಕಿದ ಬಳಿಕ, ನಿಯಮ ಮೀರಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದರೆ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲಾಗುವುದು. ಸದ್ಯ ಒಂದು ತಿಂಗಳ ಕಾಲ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು.

ಒತ್ತುವರಿ ತೆರವಿಗೆ ಜೂನ್ 10ರ ಗಡುವು (ಪಿಡಬ್ಲ್ಯೂಡಿ ಎಚ್ಚರಿಕೆ):

ಲೋಕೋಪಯೋಗಿ ಇಲಾಖೆಯ ಎಇಇ ಸುನೀಲ್ ಮಾತನಾಡಿ, ಪಾದಚಾರಿಗಳ ಅನುಕೂಲಕ್ಕಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರಿಸಿದರು.ನಾಲ್ಕು ಪ್ರಮುಖ ರಸ್ತೆಗಳಲ್ಲಿ ಚರಂಡಿಯಿಂದ 6 ಅಡಿ ಜಾಗದಲ್ಲಿ ಇಂಟರ್ ಲಾಕ್ ಅಳವಡಿಸಿ ಸುಸಜ್ಜಿತ ಫುಟ್‌ಪಾತ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಕಟ್ಟಡ ಮಾಲೀಕರು ಜೂನ್ 10ರೊಳಗೆ ತಾವಾಗಿಯೇ ಒತ್ತುವರಿ ತೆರವುಗೊಳಿಸಿ ಊರಿನ ಅಭಿವೃದ್ಧಿಗೆ ಸಹಕರಿಸಬೇಕು.

​ಖಡಕ್ ವಾರ್ನಿಂಗ್: ಒಂದು ವೇಳೆ ಜೂನ್ 10ರೊಳಗೆ ತೆರವುಗೊಳಿಸದಿದ್ದರೆ, ಯಾವುದೇ ಮುಲಾಜಿಲ್ಲದೆ ಜೆಸಿಬಿ ಬಳಸಿ ಇಲಾಖೆಯಿಂದಲೇ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕರ ಮತ್ತು ವರ್ತಕರ ಪ್ರತಿಕ್ರಿಯೆ:

​ವರ್ತಕರ ಅಹವಾಲು: ಎಂ.ಸುರೇಶ್‌ಸಿಂಗ್, ಸುಂದರೇಶ್ ಸೇರಿದಂತೆ ಪ್ರಮುಖ ವರ್ತಕರು ಮಾತನಾಡಿ, ಸಾಗರ ರಸ್ತೆ ವಿಸ್ತರಣೆ ಕಾಮಗಾರಿಯಲ್ಲಿ ಆಗಿರುವ ಲೋಪಗಳ ಬಗ್ಗೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಭೆಯ ಗಮನ ಸೆಳೆದರು.

​ಸಾರ್ವಜನಿಕರ ಬೆಂಬಲ: ಅರ್ ಎ ಚಾಬುಸಾಬ್ , ಸುಧೀಂದ್ರ ಪೂಜಾರಿ, ಎಂ.ಬಿ.ಮಂಜುನಾಥ್ ಮತ್ತಿತರರು ಮಾತನಾಡಿ, ಸುಗಮ ಸಂಚಾರಕ್ಕಾಗಿ ಇಲಾಖೆ ಕೈಗೊಂಡಿರುವ ನಿರ್ಧಾರಗಳಿಗೆ ಬೆಂಬಲ ವ್ಯಕ್ತಪಡಿಸಿದರು. ವಾಹನ ನಿಲುಗಡೆ ನಿಯಂತ್ರಿಸಲು ಸ್ಥಳದಲ್ಲಿ ಹೋಂ ಗಾರ್ಡ್‌ಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಸಲಹೆ ನೀಡಿದರು.

​ಸಭೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ಪ್ರೊಬೇಷನರಿ ಪಿಎಸ್‌ಐ ಶ್ರೀಕಾಂತ್ ಮತ್ತು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು. ಪಿಎಸ್‌ಐ ರಾಜುರೆಡ್ಡಿ ಸ್ವಾಗತ ಕೋರಿದರು, ಉಮೇಶ್ ವಂದನಾರ್ಪಣೆ ಮಾಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

4 hours ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

4 hours ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

5 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

5 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

8 hours ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

11 hours ago